ಎಕ್ಸ್‌ಪ್ರೆಸ್ ಆರ್‌ಟಿ-ಪಿಸಿಆರ್ ಯಂತ್ರ 
ರಾಜ್ಯ

'ಅಪಾಯದಲ್ಲಿಲ್ಲದ' ರಾಷ್ಟ್ರಗಳಿಂದ ಬೆಂಗಳೂರಿಗೆ ಬರುವ ಶೇ. 2 ರಷ್ಟು ಪ್ರಯಾಣಿಕರಿಗೆ ಕೋವಿಡ್ ರ‍್ಯಾಂಡಮ್‌ ಟೆಸ್ಟ್

ಓಮಿಕ್ರಾನ್ ವೇರಿಯಂಟ್ ಭಯದ ನಂತರ ಹೊಸ ನಿಯಮಗಳಿಗೆ ಅನುಗುಣವಾಗಿ, 'ಅಪಾಯದಲ್ಲಿಲ್ಲದ' ದೇಶಗಳಿಂದ ಬೆಂಗಳೂರಿಗೆ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ಕೋವಿಡ್ ರ‍್ಯಾಂಡಮ್‌ ಟೆಸ್ಟ್ ಗೆ ಒಳಗಾಗುತ್ತಿದ್ದಾರೆ...

ಬೆಂಗಳೂರು: ಓಮಿಕ್ರಾನ್ ವೇರಿಯಂಟ್ ಭಯದ ನಂತರ ಹೊಸ ನಿಯಮಗಳಿಗೆ ಅನುಗುಣವಾಗಿ, 'ಅಪಾಯದಲ್ಲಿಲ್ಲದ' ದೇಶಗಳಿಂದ ಬೆಂಗಳೂರಿಗೆ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ಕೋವಿಡ್ ರ‍್ಯಾಂಡಮ್‌ ಟೆಸ್ಟ್ ಗೆ ಒಳಗಾಗುತ್ತಿದ್ದಾರೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಶನಿವಾರ ತಿಳಿಸಿದೆ.

ವಿಮಾನ ನಿಲ್ದಾಣವನ್ನು ನಿರ್ವಹಿಸುವ ಬಿಐಎಎಲ್, "ಅಂತರರಾಷ್ಟ್ರೀಯ ಪ್ರಯಾಣದ ಮಾರ್ಗಸೂಚಿಗಳ ಪ್ರಕಾರ, 'ಅಪಾಯಕಾರಿ' ಪಟ್ಟಿಯಲ್ಲಿಲ್ಲದ ದೇಶಗಳಿಂದ ಬರುವ ಶೇ. 2 ರಷ್ಟು ಪ್ರಯಾಣಿಕರು ಆಗಮನದ ನಂತರ ವಿಮಾನ ನಿಲ್ದಾಣದಲ್ಲಿ ರ‍್ಯಾಂಡಮ್‌ ಪರೀಕ್ಷೆಗೆ ಒಳಗಾಗುತ್ತಾರೆ. ಅಂತಹ ಪ್ರಯಾಣಿಕರ ರ‍್ಯಾಂಡಮ್‌ ಪರೀಕ್ಷೆಯ ವೆಚ್ಚವನ್ನು ಬಿಐಎಎಲ್ ಭರಿಸಲಿದೆ" ಕೆಐಎ ಟ್ವೀಟ್ ಮಾಡಿದೆ.

ಓಮಿಕ್ರಾನ್ ರೂಪಾಂತರಿ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ನವೆಂಬರ್ 30 ರಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಪಾಯದಲ್ಲಿರುವ ದೇಶಗಳನ್ನು ಹೊರತುಪಡಿಸಿ ಇತರೆ ದೇಶಗಳ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುವುದು ಮತ್ತು ಆಗಮನದ ನಂತರ 14 ದಿನಗಳವರೆಗೆ ಅವರ ಆರೋಗ್ಯ ಮೇಲೆ ಸ್ವಯಂ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಿದೆ.

ಒಂದು ಉಪ-ವಿಭಾಗ ಅಥವಾ ಒಟ್ಟು ವಿಮಾನ ಪ್ರಯಾಣಿಕರಲ್ಲಿ ಶೇ. 2 ರಷ್ಟು ಪ್ರಯಾಣಿಕರು ಆಗಮನದ ನಂತರ ವಿಮಾನ ನಿಲ್ದಾಣದಲ್ಲಿ ರ‍್ಯಾಂಡಮ್‌ ಪರೀಕ್ಷೆಗೆ ಒಳಗಾಗಬೇಕು ಎಂದು ಸೂಚಿಸಿದೆ.

ಶುಕ್ರವಾರದಿಂದ ಆಗಮಿಸುವ ಪ್ರಯಾಣಿಕರಿಗೆ ಮತ್ತೊಂದು ದೊಡ್ಡ ರಿಲೀಫ್ ಸಿಕ್ಕಿದ್ದು, ಎಕ್ಸ್‌ಪ್ರೆಸ್ ಆರ್‌ಟಿ-ಪಿಸಿಆರ್‌ಗಾಗಿ 50 ಹೊಸ ಅಬಾಟ್ ಐಡಿ ಯಂತ್ರಗಳನ್ನು ವಿಮಾನ ನಿಲ್ದಾಣಕ್ಕೆ ಸ್ಥಾಪಿಸಲಾಗಿದೆ.

ಶೇ 90 ರಷ್ಟು ಪ್ರಯಾಣಿಕರು ಕ್ಷಿಪ್ರ ಅಥವಾ ಎಕ್ಸ್‌ಪ್ರೆಸ್ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಆರಿಸಿಕೊಳ್ಳುತ್ತಾರೆ, ಇದಕ್ಕೆ 3,000 ರೂ. ವೆಚ್ಚವಾಗುತ್ತದೆ ಮತ್ತು ಒಂದು ಗಂಟೆಯೊಳಗೆ ಫಲಿತಾಂಶ ನೀಡುತ್ತದೆ. ನಿಯಮಿತ ಪರೀಕ್ಷೆಗೆ 500 ರೂ. ವೆಚ್ಚವಾಗುತ್ತದೆ ಮತ್ತು ಫಲಿತಾಂಶ ಬರಲು 5 ರಿಂದ 6 ಗಂಟೆ ತೆಗೆದುಕೊಳ್ಳುತ್ತದೆ. ಬಿಐಎಎಲ್ ವಿಮಾನ ನಿಲ್ದಾಣದಲ್ಲಿ ವೈ-ಫೈ ಸಂಪರ್ಕವನ್ನು ಸುಧಾರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT