ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಫೋಟ: 70 ವಿದ್ಯಾರ್ಥಿಗಳಿಗೆ ಸೋಂಕು

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಧಾರವಾಡ, ಬೆಂಗಳೂರು, ಹಾಸನ ನಂತರ ಇದೀಗ ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿನ ಸುಮಾರು 70 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಚಿಕ್ಕಮಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಧಾರವಾಡ, ಬೆಂಗಳೂರು, ಹಾಸನ ನಂತರ ಇದೀಗ ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 70 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಎನ್ ಆರ್ ಪುರ ತಾಲ್ಲೂಕಿನ ಸಿಗೋಡುನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಸೋಂಕು ಕಾಣಿಸಿಕೊಂಡು ಕ್ಲಸ್ಟರ್ ಆಗಿದೆ. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವಿದ್ಯಾಲಯದ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಪೋಷಕರಲ್ಲಿ, ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ತಂದಿದೆ. ಕ್ಲಸ್ಪರ್ ನ್ನಾಗಿ ಆರೋಗ್ಯ ಇಲಾಖೆ ಪರಿವರ್ತಿಸಿ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ಜವಾಹರ್ ನವೋದಯ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗು ನಾಲ್ವರು ಸಿಬ್ಬಂದಿಯಲ್ಲಿ ಮೊದಲು ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, 418 ವಿದ್ಯಾರ್ಥಿಗಳು, ಸಿಬ್ಬಂದಿಯ ಮಾದರಿಯನ್ನು ಆರೋಗ್ಯ ಇಲಾಖೆ ಪಡೆದಿತ್ತು. ಆ ಪೈಕಿ ಈವರೆಗೆ 70 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ. ಸದ್ಯ ಈಗ ಜವಾಹರ್ ನವೋದಯ ವಿದ್ಯಾಲಯವನ್ನು ಸೀಲ್‌ಡೌನ್ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT