ಸಂಗ್ರಹ ಚಿತ್ರ 
ರಾಜ್ಯ

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಎಸ್ಎಂಎಸ್ ಮೂಲಕ ನೋಟಿಸ್ ರವಾನೆ!

ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಂದ ದಂಡ ವಸೂಲಿಗೆ ಬೆಂಗಳೂರು ಸಂಚಾರ ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಇನ್ನು ಮುಂದೆ ಎಸ್‌ಎಂಎಸ್ ಮೂಲಕವೇ ದಂಡ ಪಾವತಿ ನೋಟಿಸ್ ಬರಲಿದೆ!..

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಂದ ದಂಡ ವಸೂಲಿಗೆ ಬೆಂಗಳೂರು ಸಂಚಾರ ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಇನ್ನು ಮುಂದೆ ಎಸ್‌ಎಂಎಸ್ ಮೂಲಕವೇ ದಂಡ ಪಾವತಿ ನೋಟಿಸ್ ಬರಲಿದೆ!..

ಈ ಮೂಲಕ ಈ ಹಿಂದೆ ಅಂಚೆ ಮೂಲಕ ನೋಟಿಸ್ ನೀಡುವ ದುಬಾರಿ ವೆಚ್ಚದ ನಿಯಮಕ್ಕೆ ಸಂಚಾರಿ ಪೊಲೀಸರು ಬ್ರೇಕ್ ಹಾಕಿದ್ದು, ತಂತ್ರಜ್ಞಾನ ಆಧಾರಿತ, ಎಸ್ಎಂಎಸ್ ನೋಟಿಸ್ ರವಾನೆಗೆ ಪ್ರಾಯೋಗಿಕ ಚಾಲನೆ ನೀಡಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ. ಆರ್. ರವಿಕಾಂತೇಗೌಡ ಅವರು, ಬೆಂಗಳೂರು ಸಂಚಾರ ವಿಭಾಗದಲ್ಲಿ ಸಂಚಾರ ನಿಯಮ ಉಲ್ಲಂಘನೆ, ದಂಡದ ಮೊತ್ತವನ್ನು ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ಪುಸ್ತಕದಲ್ಲಿ ನಮೂದಿಸುತ್ತಿದ್ದರು. ಈ ವಿವರ ಆಧರಿಸಿ ಎಫ್‌ಟಿಆರ್ ಪುಸ್ತಕದಲ್ಲಿ ಉಲ್ಲೇಖಿಸಿದ್ದನ್ನು ಆಧರಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿತ್ತು. ಇನ್ನು ನಿಯಮ ಉಲ್ಲಂಘನೆ ಸಂಬಂಧ ವಾಹನ ಸವಾರರಿಗೆ ಅಂಚೆ ಮೂಲಕ ನೋಟಿಸ್ ರವಾನಿಸಲಾಗುತ್ತಿತ್ತು. ಪ್ರತಿ ನೋಟಿಸ್‌ಗೆ ಸರಾಸರಿ 4.50 ರೂ. ವೆಚ್ಚ ವಾಗುತ್ತಿತ್ತು. ಹೀಗಾಗಿ ಪ್ರತಿ ದಿನ 20 ಸಾವಿರ ನೋಟಿಸ್ ನೀಡಲು ಒಂದು ಲಕ್ಷ ರೂ. ವೆಚ್ಚವಾಗುತ್ತಿತ್ತು. ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಂಚಾರ ಇಲಾಖೆ ತಂತ್ರಜ್ಞಾನ ಮೊರೆ ಹೋಗಿದೆ ಎಂದು ಹೇಳಿದ್ದಾರೆ.

ಇದರ ಬದಲಾಗಿ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ಮೊಬೈಲ್ ನಂಬರ್‌ಗೆ ನೋಟಿಸ್ ಜಾರಿ ಮಾಡಲಾಗುತ್ತದೆ. ಎಸ್ಎಂಎಸ್ ಮೂಲಕವೇ ದಂಡದ ಮೊತ್ತ, ಸಂಚಾರ ನಿಯಮ ಉಲ್ಲಂಘನೆ ವಿವರಗಳು ಸಂದೇಶದಲ್ಲಿ ಅಡಕವಾಗಲಿದೆ. ಹೊಸ ಎಸ್ಎಂಎಸ್ ವ್ಯವಸ್ಥೆಯು ಎಲ್ಲಾ ಟ್ರಾಫಿಕ್ ಉಲ್ಲಂಘಿಸುವವರಿಗೆ ಅನ್ವಯಿಸುವುದಿಲ್ಲ. "ಈ ಹೊಸ ವ್ಯವಸ್ಥೆಯು 2019 ರಿಂದ ನೋಂದಣಿಯಾದ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಉಳಿದೆಲ್ಲಾ ವಾಹನಗಳಿಗೂ ಅಂಚೆ ಮೂಲಕ ನೋಟಿಸ್ ನೀಡಲಾಗುತ್ತದೆ.

ಇದರಿಂದ ಸಿಬ್ಬಂದಿ ಶ್ರಮದ ಜತೆಗೆ ಅನಾವಶ್ಯಕ ದುಂದು ವೆಚ್ಚ ಹಾಗೂ ಕಾಗದ ರಹಿತ ಆಡಳಿತ ನೀಡಲು ನೆರವಾಗಲಿದೆ. ಕೇವಲ 20 ಪೈಸೆ ವೆಚ್ಚದಲ್ಲಿ ಒಂದು ನೋಟಿಸ್ ರವಾನೆಯಾಗಲಿದ್ದು, ಒಂದು ನೋಟಿಸ್‌ನಿಂದ 4.30 ಪೈಸೆ ಇಲಾಖೆಗೆ ಉಳಿತಾಯವಾಗಲಿದೆ. ಇದರಿಂದ ಆರ್ಥಿಕ ಹೊರೆ ಕೂಡ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT