ಸಂಗ್ರಹ ಚಿತ್ರ 
ರಾಜ್ಯ

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಎಸ್ಎಂಎಸ್ ಮೂಲಕ ನೋಟಿಸ್ ರವಾನೆ!

ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಂದ ದಂಡ ವಸೂಲಿಗೆ ಬೆಂಗಳೂರು ಸಂಚಾರ ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಇನ್ನು ಮುಂದೆ ಎಸ್‌ಎಂಎಸ್ ಮೂಲಕವೇ ದಂಡ ಪಾವತಿ ನೋಟಿಸ್ ಬರಲಿದೆ!..

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಂದ ದಂಡ ವಸೂಲಿಗೆ ಬೆಂಗಳೂರು ಸಂಚಾರ ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಇನ್ನು ಮುಂದೆ ಎಸ್‌ಎಂಎಸ್ ಮೂಲಕವೇ ದಂಡ ಪಾವತಿ ನೋಟಿಸ್ ಬರಲಿದೆ!..

ಈ ಮೂಲಕ ಈ ಹಿಂದೆ ಅಂಚೆ ಮೂಲಕ ನೋಟಿಸ್ ನೀಡುವ ದುಬಾರಿ ವೆಚ್ಚದ ನಿಯಮಕ್ಕೆ ಸಂಚಾರಿ ಪೊಲೀಸರು ಬ್ರೇಕ್ ಹಾಕಿದ್ದು, ತಂತ್ರಜ್ಞಾನ ಆಧಾರಿತ, ಎಸ್ಎಂಎಸ್ ನೋಟಿಸ್ ರವಾನೆಗೆ ಪ್ರಾಯೋಗಿಕ ಚಾಲನೆ ನೀಡಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ. ಆರ್. ರವಿಕಾಂತೇಗೌಡ ಅವರು, ಬೆಂಗಳೂರು ಸಂಚಾರ ವಿಭಾಗದಲ್ಲಿ ಸಂಚಾರ ನಿಯಮ ಉಲ್ಲಂಘನೆ, ದಂಡದ ಮೊತ್ತವನ್ನು ಫೀಲ್ಡ್ ಟ್ರಾಫಿಕ್ ಉಲ್ಲಂಘನೆ ಪುಸ್ತಕದಲ್ಲಿ ನಮೂದಿಸುತ್ತಿದ್ದರು. ಈ ವಿವರ ಆಧರಿಸಿ ಎಫ್‌ಟಿಆರ್ ಪುಸ್ತಕದಲ್ಲಿ ಉಲ್ಲೇಖಿಸಿದ್ದನ್ನು ಆಧರಿಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿತ್ತು. ಇನ್ನು ನಿಯಮ ಉಲ್ಲಂಘನೆ ಸಂಬಂಧ ವಾಹನ ಸವಾರರಿಗೆ ಅಂಚೆ ಮೂಲಕ ನೋಟಿಸ್ ರವಾನಿಸಲಾಗುತ್ತಿತ್ತು. ಪ್ರತಿ ನೋಟಿಸ್‌ಗೆ ಸರಾಸರಿ 4.50 ರೂ. ವೆಚ್ಚ ವಾಗುತ್ತಿತ್ತು. ಹೀಗಾಗಿ ಪ್ರತಿ ದಿನ 20 ಸಾವಿರ ನೋಟಿಸ್ ನೀಡಲು ಒಂದು ಲಕ್ಷ ರೂ. ವೆಚ್ಚವಾಗುತ್ತಿತ್ತು. ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಂಚಾರ ಇಲಾಖೆ ತಂತ್ರಜ್ಞಾನ ಮೊರೆ ಹೋಗಿದೆ ಎಂದು ಹೇಳಿದ್ದಾರೆ.

ಇದರ ಬದಲಾಗಿ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ಮೊಬೈಲ್ ನಂಬರ್‌ಗೆ ನೋಟಿಸ್ ಜಾರಿ ಮಾಡಲಾಗುತ್ತದೆ. ಎಸ್ಎಂಎಸ್ ಮೂಲಕವೇ ದಂಡದ ಮೊತ್ತ, ಸಂಚಾರ ನಿಯಮ ಉಲ್ಲಂಘನೆ ವಿವರಗಳು ಸಂದೇಶದಲ್ಲಿ ಅಡಕವಾಗಲಿದೆ. ಹೊಸ ಎಸ್ಎಂಎಸ್ ವ್ಯವಸ್ಥೆಯು ಎಲ್ಲಾ ಟ್ರಾಫಿಕ್ ಉಲ್ಲಂಘಿಸುವವರಿಗೆ ಅನ್ವಯಿಸುವುದಿಲ್ಲ. "ಈ ಹೊಸ ವ್ಯವಸ್ಥೆಯು 2019 ರಿಂದ ನೋಂದಣಿಯಾದ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ ಮತ್ತು ಉಳಿದೆಲ್ಲಾ ವಾಹನಗಳಿಗೂ ಅಂಚೆ ಮೂಲಕ ನೋಟಿಸ್ ನೀಡಲಾಗುತ್ತದೆ.

ಇದರಿಂದ ಸಿಬ್ಬಂದಿ ಶ್ರಮದ ಜತೆಗೆ ಅನಾವಶ್ಯಕ ದುಂದು ವೆಚ್ಚ ಹಾಗೂ ಕಾಗದ ರಹಿತ ಆಡಳಿತ ನೀಡಲು ನೆರವಾಗಲಿದೆ. ಕೇವಲ 20 ಪೈಸೆ ವೆಚ್ಚದಲ್ಲಿ ಒಂದು ನೋಟಿಸ್ ರವಾನೆಯಾಗಲಿದ್ದು, ಒಂದು ನೋಟಿಸ್‌ನಿಂದ 4.30 ಪೈಸೆ ಇಲಾಖೆಗೆ ಉಳಿತಾಯವಾಗಲಿದೆ. ಇದರಿಂದ ಆರ್ಥಿಕ ಹೊರೆ ಕೂಡ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT