ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ರಾಜ್ಯಪಾಲ ಗೆಹೋಟ್. 
ರಾಜ್ಯ

ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ನೌಕಾಪಡೆಯ ದಿನವಾದ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಶನಿವಾರ ಭೇಟಿ ನೀಡಿ, ನೌಕಾಪಡೆಗಳಿಗೆ ಶುಭಾಶಯಗಳನ್ನು ಕೋರಿದರು.

ಕಾರವಾರ: ನೌಕಾಪಡೆಯ ದಿನವಾದ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಶನಿವಾರ ಭೇಟಿ ನೀಡಿ, ನೌಕಾಪಡೆಗಳಿಗೆ ಶುಭಾಶಯಗಳನ್ನು ಕೋರಿದರು.

ನೌಕಾನೆಲೆಗೆ ಆಗಮಿಸಿದ ರಾಜ್ಯಪಾಲರನ್ನು ಕರ್ನಾಟಕ ನೌಕಾ ಪ್ರದೇಶದ ಕಮಾಂಡಿಂಗ್ ಫ್ಲಾಗ್ ಆಫೀಸರ್ ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಎನ್ ಎಂ ಅವರು ಸ್ವಾಗತಿಸಿದರು.

ಬಳಿಕ ರಾಜ್ಯಪಾಲರಿಗೆ ಐಎನ್‌ಎಸ್ ಕದಂಬ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಅವರೊಂದಿಗೆ ರಾಜ್ಯಪಾಲರು ಐಎನ್ಎಸ್ ವಿಕ್ರಮಾದಿತ್ಯ ಹಡಗಿನಲ್ಲಿ ಪ್ರಯಾಣ ಮಾಡಿದರು, ಅಲ್ಲಿ ಅವರನ್ನು ಕ್ಯಾಪ್ಟನ್ ಸುಶೀಲ್ ಮೆನನ್, ಕಮಾಂಡಿಂಗ್ ಆಫೀಸರ್ ಐಎನ್ಎಸ್ ವಿಕ್ರಮಾದಿತ್ಯ ಅವರು ಸ್ವಾಗತಿಸಿದರು.

ನೌಕಪಡೆ ದಿನದ ಅಂಗವಾಗಿ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ಯುದ್ಧನೌಕೆಗಳನ್ನು ಸಿಂಗರಿಸಲಾಗಿತ್ತು. ನೌಕಾಪಡೆಯ ಬ್ಯಾಂಡ್ ತಂಡ ಲಯಬದ್ಧವಾಗಿ ಬ್ಯಾಂಡ್ ನುಡಿಸಿ ಮೆರುಗು ತಂದಿತು.

ಆಕರ್ಷಿಕ ಬೀಟಿಂಗ್ ರೀಟ್ರೇಟ್ ಪ್ರದರ್ಶಿಸಲಾಯಿತು. ನೌಕಾದಿನದ ಸಮಾರಂಭದಲ್ಲಿ ರಾಜ್ಯಪಾಲಕು ಪಾಲ್ಗೊಂಡಿರುವುದಕ್ಕೆ ಕಂಬದ ನೌಕಾನೆಲೆಯ ಫ್ಲ್ಯಾಗ್ ಆಫೀಸರ್ ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT