ಸಂಗ್ರಹ ಚಿತ್ರ 
ರಾಜ್ಯ

ಮಕ್ಕಳು ಸೇರಿ 11 ಮಂದಿಯಲ್ಲಿ ಕೋವಿಡ್ ಪಾಸಿಟಿವ್: ತುಮಕೂರಿನಲ್ಲಿ ಮತ್ತೊಂದು ಕ್ಲಸ್ಟರ್ ಪತ್ತೆ!

ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.

ತುಮಕೂರು/ಹಾಸನ: ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.
    
ಪೆರುಮನಹಳ್ಳಿ ಗ್ರಾಮದಲ್ಲಿ ಮೂವರು ಮಕ್ಕಳು ಸೇರಿ 11 ಮಂದಿಯಲ್ಲಿ ಶನಿವಾರ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಮೂಲಕ ತುಮಕೂರಿನಲ್ಲಿ ಮೂರನೇ ಕ್ಲಸ್ಟರ್ ಪತ್ತೆಯಾದಂತಾಗಿದೆ.

ಸೋಂಕಿತರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, 11 ಮಂದಿಯ ಪೈಕಿ ನಾಲ್ವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಂಗ್ರಹಿಸಲಾದ ಸೋಂಕಿತರ ಮಾದರಿಗಳನ್ನು ಜಿನೋಮ್ ಅನುಕ್ರಮಕ್ಕಾಗಿ ಐಎನ್‌ಎಸ್‌ಎಸಿಒಜಿ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 41 ಮಂದಿಯನ್ನೂ ಆರ್'ಟಿ-ಪಿಸಿಆರ್ ಪರೀಕ್ಷೆಗೊಳಪಡಿಸಲಾಗುತ್ತಿದೆ.

ಅವರೆಲ್ಲರೂ ಒಂದೇ ಗ್ರಾಮದವರಾಗಿದ್ದು, ಸಂಬಂಧಿಗಳಾಗಿದ್ದಾರೆ. ಇತ್ತೀಚೆಗೆ ತಮ್ಮ ಸಂಬಂಧಿಕರ ಗೃಹಪ್ರವೇಶ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಮಧುಗಿರಿಗೆ ತೆರಳಿದ್ದರು. ಸಮಾರಂಭಕ್ಕೆ ಹೊರಗಿನಿಂದ ಬಂದ ಜನರೂ ಇದ್ದ ಹಿನ್ನೆಲೆಯಲ್ಲಿ ಈ ಮೂಲಕ ಸೋಂಕು ತಗುಲಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದಲ್ಲದೆ ಜಿಲ್ಲೆಯಲ್ಲಿ ಕೇರಳದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳಲ್ಲೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜನ್ನು ಬಂದ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಾಸನ ಜಿಲ್ಲೆಯ ಸಕಲೇಶಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನಾಲ್ವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಅಧಿಕಾರಿಗಳು ನಡೆಸಿದ ರ್ಯಾಂಡಮ್ ಪರೀಕ್ಷೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT