ಸಾರ್ವಜನಿಕ ಸ್ಥಳಗಳಲ್ಲಿ 2ನೇ ಡೋಸ್ ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶವನ್ನು ನಿರ್ಬಂಧಿಸುವ ಸರ್ಕಾರದ ಹೊಸ ನಿಯಮ ಹಿನ್ನೆಲೆಯಲ್ಲಿ ನಗರದ ಮಾಲ್ ನಲ್ಲಿ ಜನರನ್ನು ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು. 
ರಾಜ್ಯ

ಮಾಲ್, ಚಿತ್ರಮಂದಿರ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯಗೊಳಿಸಿದ ಬಿಬಿಎಂಪಿ!

ಓಮಿಕ್ರಾನ್ ಆತಂಕ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮಾಲ್, ಚಿತ್ರಮಂದಿರ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಎರಡು ಡೋಸ್ ಲಸಿಕೆ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಿದೆ. ಇದರ ಜೊತೆಗೆ ಮಾಲ್ ಗಳ ಮಾಲೀಕರು ಹಾಗೂ ಕಾರ್ಯಕ್ರಮಗಳ...

ಬೆಂಗಳೂರು: ಓಮಿಕ್ರಾನ್ ಆತಂಕ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮಾಲ್, ಚಿತ್ರಮಂದಿರ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಎರಡು ಡೋಸ್ ಲಸಿಕೆ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಿದೆ. ಇದರ ಜೊತೆಗೆ ಮಾಲ್ ಗಳ ಮಾಲೀಕರು ಹಾಗೂ ಕಾರ್ಯಕ್ರಮಗಳ ಆಯೋಜಕರು ಸ್ಥಳದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗಪ್ತಾ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಈಗಾಗಲೇ ನಿರ್ದೇಶನಗಳು ಹಾಗೂ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗಿದೆ. ಮಾಲ್, ಚಿತ್ರಮಂದಿರಗಳಿಗೆ ಬರುವ ಜನರು 2 ಡೋಸ್ ಲಸಿಕೆ ಪಡೆದಿರುವ ಕುರಿತು ಪರಿಶೀಲಿಸುವುದು ಮಾಲೀಕರ ಜವಾಬ್ದಾರಿಯಾಗಿರುತ್ತದೆ. ಸಾಮಾಜಿಕ ಆರೋಗ್ಯ ಮತ್ತು ಸುರಕ್ಷತೆಗಾಗಿ ಅದನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನಿಯಮಗಳ ಪಾಲನೆ ಮಾಡುತ್ತಿರುವುದನ್ನು ಪ್ರತೀನಿತ್ಯ ಪರಿಶೀಲನೆ ಮಾಡಲು ಸಾಧ್ಯವಾಗದಿದ್ದರೂ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮಗಳ ಕೈಗೊಳ್ಳಲಾಗುತ್ತದೆ. ಇದೀಗ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ಜನರು 2ನೇ ಡೋಸ್ ಲಸಿಕೆ ಪಡೆದುಕೊಳ್ಳಲು ಮುಂಬರುತ್ತಿದ್ದಾರೆ. ಮೊಬೈಲ್ ವ್ಯಾಕ್ಸಿನ್ ಕ್ಯಾಂಪ್ ಗಳನ್ನೂ ಕೂಡ ನಡೆಸಲಾಗುತ್ತಿದೆ ಎಂದಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಪಡೆದುಕೊಳ್ಳುವಲ್ಲಿ ಸಮಸ್ಯೆಗಳು ಎದುರಾಗಿದ್ದೇ ಆದರೆ, ಅವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಶೇ.99ರಷಅಟು ಮಂದಿ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಶೇ.66 ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಮಾಸ್ಕ್ ಧರಿಸದೆ ಹೊರಗೆ ಬಂದವರಿಂದ ಒಟ್ಟಾರೆ ರೂ.1 ಕೋಟಿ ದಂಡ ಸ್ವೀಕರಿಸಿದೆ ಎಂದು ಮತ್ತೊಬ್ಬ ಬಿಬಿಎಂಪಿ ಅಧಿಕಾರಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT