ರಾಯಭಾಗ: ಯುವಕನ ತಲೆಗೆ ರಾಡಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕೊಲೆಯಾದ ಯುವಕ ಅರ್ಜುನ್ ಮಾರುತಿ ನಗಡೆ ಎಂದು ತಿಳಿದುಬಂದಿದೆ. ಕೊಲೆಗೆ ಅನೈತಿಕ ಸಂಬಂಧ ಕಾರಣ ಎನ್ನಲಾಗುತ್ತಿದೆ.
ಯುವಕ ಅರ್ಜುನ್ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ. ಆ ಬಗ್ಗೆ ಆತನ ಪೋಷಕರು ಪೊಲೀಸ್ ದೂರು ನೀಡಿದ್ದರು. ಪೊಲೀಸ್ ಕಾರ್ಯಾಚರಣೆ ಸಮಯದಲ್ಲಿ ಆರ್ಜುನ್ ನನ್ನು ಕೊಲೆ ಮಾಡಿ ಆತನ ಶವವನ್ನು ಹೊಳೆಗೆ ಎಸೆದಿರುವ ಸಂಗತಿ ಬೆಳಕಿಗೆ ಬಂದಿತ್ತು.
ಮಹಿಳೆಯ ಪತಿ ಭೀಮಪ್ಪನೇ ಆರೋಪಿಯೆಂದು ತಿಳಿದುಬಂದಿದ್ದು, ಪೊಲೀಸರು ಆತನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.