ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ತಜ್ಞರೊಂದಿಗೆ ಚರ್ಚಿಸಿ ಮಾಲ್, ಥಿಯೇಟರ್ ಗಳಲ್ಲಿ ಶೇ.50 ಮಿತಿ ಜಾರಿ: ಸಿಎಂ ಬೊಮ್ಮಾಯಿ

ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 

ಹುಬ್ಬಳ್ಳಿ: ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಓಮಿಕ್ರಾನ್ ಸೇರಿದಂತೆ ಕೋವಿಡ್-19 ಪ್ರಕರಣಗಳಲ್ಲಿ ಗಣನೀಯವಾಗಿ ಏರಿಕೆ ಕಂಡುಬರುತ್ತಿದ್ದು   ಇದು ಮೂರನೇ ಅಲೆಗೆ ದಾರಿ ಮಾಡಿಕೊಡಬಹುದಾಗಿದ್ದು ಸೋಂಕು ಪ್ರಸರಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೂರನೇ ಅಲೆಯ ಭೀತಿಯನಡುವೆ ಆರೋಗ್ಯ ಇಲಾಖೆ ಹಲವು ಜಿಲ್ಲೆಗಳಲ್ಲಿ ಸೋಂಕು ಪತ್ತೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದೆ. ಕಳೆದ 2 ವಾರಗಳಲ್ಲಿ ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಲ್ಲಿ ಹೆಚ್ಚು ಸೋಂಕು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಫ್ ಲೈನ್ ತರಗತಿಗಳನ್ನು ನಿಲ್ಲಿಸಲು ಒತ್ತಾಯ ಮಾಡಲಾಗುತ್ತಿದೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಗದಗ ಹಾಗೂ ಹಾವೇರಿಗಳಲ್ಲಿ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಸಿಎಂ ಮಾತನಾಡುತ್ತಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT