ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ತಜ್ಞರೊಂದಿಗೆ ಚರ್ಚಿಸಿ ಮಾಲ್, ಥಿಯೇಟರ್ ಗಳಲ್ಲಿ ಶೇ.50 ಮಿತಿ ಜಾರಿ: ಸಿಎಂ ಬೊಮ್ಮಾಯಿ

ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 

ಹುಬ್ಬಳ್ಳಿ: ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ. 

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಓಮಿಕ್ರಾನ್ ಸೇರಿದಂತೆ ಕೋವಿಡ್-19 ಪ್ರಕರಣಗಳಲ್ಲಿ ಗಣನೀಯವಾಗಿ ಏರಿಕೆ ಕಂಡುಬರುತ್ತಿದ್ದು   ಇದು ಮೂರನೇ ಅಲೆಗೆ ದಾರಿ ಮಾಡಿಕೊಡಬಹುದಾಗಿದ್ದು ಸೋಂಕು ಪ್ರಸರಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೂರನೇ ಅಲೆಯ ಭೀತಿಯನಡುವೆ ಆರೋಗ್ಯ ಇಲಾಖೆ ಹಲವು ಜಿಲ್ಲೆಗಳಲ್ಲಿ ಸೋಂಕು ಪತ್ತೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದೆ. ಕಳೆದ 2 ವಾರಗಳಲ್ಲಿ ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಲ್ಲಿ ಹೆಚ್ಚು ಸೋಂಕು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಫ್ ಲೈನ್ ತರಗತಿಗಳನ್ನು ನಿಲ್ಲಿಸಲು ಒತ್ತಾಯ ಮಾಡಲಾಗುತ್ತಿದೆ. 

ಪರಿಷತ್ ಚುನಾವಣೆ ಪ್ರಚಾರ ಸಭೆಯ ಹಿನ್ನೆಲೆಯಲ್ಲಿ ಗದಗ ಹಾಗೂ ಹಾವೇರಿಗಳಲ್ಲಿ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಸಿಎಂ ಮಾತನಾಡುತ್ತಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT