ರಾಜ್ಯ

ಆರ್ ಎಸ್ಎಸ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ 

Srinivas Rao BV

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ರಾಮ್ ಭಟ್ ಅವರು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿ ಮನೆಗೆ ವಾಪಸ್ಸಾಗಿದ್ದರು.  ಆದರೆ ಇಂದು ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಸ್ಪರ್ಧಿಸಿದ್ದ ರಾಮ್ ಭಟ್ ಅವರು 2 ಬಾರಿ ಶಾಸಕರಾಗಿದ್ದರು. 

ಜನಸಂಘದಿಂದ 1957 ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ರಾಮ್ ಭಟ್ ಸ್ಪರ್ಧಿಸಿದ್ದರು. ಬಿಜೆಪಿ ವಿರುದ್ಧವೂ ಬಂಡಾಯವೆದ್ದಿದ್ದ ರಾಮ್ ಭಟ್ 2009 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 

ಈ ಬಳಿಕ ಮೋದಿ ಪ್ರಧಾನಿಯಾದ ನಂತರ ರಾಮ್ ಭಟ್ ಅವರು ಬಿಜೆಪಿಗೆ ಮರಳಿ ಬೆಂಬಲ ಘೋಷಿಸಿದ್ದರು. 2019 ರಲ್ಲಿ ಮೋದಿ ಸ್ವತಃ ಕರೆ ಮಾಡಿ ರಾಮ್ ಭಟ್ ಅವರೊಂದಿಗೆ ಮಾತನಾಡಿದ್ದರು.

SCROLL FOR NEXT