ಉರಿಮಜಲು ರಾಮ್ ಭಟ್ 
ರಾಜ್ಯ

ಆರ್ ಎಸ್ಎಸ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ 

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ರಾಮ್ ಭಟ್ ಅವರು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿ ಮನೆಗೆ ವಾಪಸ್ಸಾಗಿದ್ದರು.  ಆದರೆ ಇಂದು ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಸ್ಪರ್ಧಿಸಿದ್ದ ರಾಮ್ ಭಟ್ ಅವರು 2 ಬಾರಿ ಶಾಸಕರಾಗಿದ್ದರು. 

ಜನಸಂಘದಿಂದ 1957 ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ರಾಮ್ ಭಟ್ ಸ್ಪರ್ಧಿಸಿದ್ದರು. ಬಿಜೆಪಿ ವಿರುದ್ಧವೂ ಬಂಡಾಯವೆದ್ದಿದ್ದ ರಾಮ್ ಭಟ್ 2009 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 

ಈ ಬಳಿಕ ಮೋದಿ ಪ್ರಧಾನಿಯಾದ ನಂತರ ರಾಮ್ ಭಟ್ ಅವರು ಬಿಜೆಪಿಗೆ ಮರಳಿ ಬೆಂಬಲ ಘೋಷಿಸಿದ್ದರು. 2019 ರಲ್ಲಿ ಮೋದಿ ಸ್ವತಃ ಕರೆ ಮಾಡಿ ರಾಮ್ ಭಟ್ ಅವರೊಂದಿಗೆ ಮಾತನಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT