ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರು (ಸಂಗ್ರಹ ಚಿತ್ರ) 
ರಾಜ್ಯ

ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದ ಬೆಂಗಳೂರು ವೈದ್ಯನಿಗೆ ಮತ್ತೆ ಕೋವಿಡ್ ಪಾಸಿಟಿವ್!: ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ

ಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ. 

ಬೆಂಗಳೂರು: ಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ. 

ಅಚ್ಚರಿಯೆಂಬಂತೆ ವೈದ್ಯರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಓರ್ವ ವ್ಯಕ್ತಿ ಹಾಗೂ ದ್ವಿತೀಯ ಸಂಪರ್ಕದ ಇಬ್ಬರಲ್ಲಿ ಸೋಂಕು ಪತ್ತೆ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟೀವ್ ತೋರಿಸುತ್ತಿದೆ. 

ಒಮಿಕ್ರಾನ್ ಸೋಂಕು ಪತ್ತೆಯಾಗಿ 15 ದಿನಗಳು ಕಳೆದಿದ್ದ ಹಿನ್ನೆಲೆಯಲ್ಲಿ 2 ನೇ ಬಾರಿಯ ಪರೀಕ್ಷೆಯಲ್ಲಿ ನೆಗೆಟೀವ್ ವರದಿಯನ್ನು ಅರಿವಳಿಕೆ ತಜ್ಞರಾಗಿರುವ ವೈದ್ಯರು ನಿರೀಕ್ಷಿಸುತ್ತಿದ್ದರು. ಆದರೆ 2ನೇ ಬಾರಿಯೂ ಕೋವಿಡ್-19 ಸೋಂಕು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಬೋರಿಂಗ್ ಆಸ್ಪತ್ರೆಯಲ್ಲೇ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗಿದೆ. 

ವೈದ್ಯರಿಂದ ಸಂಗ್ರಹಿಸಲಾದ ಮಾದರಿಗಳನ್ನು ಮತ್ತೊಮ್ಮೆ ಪರೀಕ್ಷೆಗಾಗಿ 24 ಗಂಟೆಗಳ ನಂತರ ಕಳಿಸಲಾಗುತ್ತದೆ. ಸೋಮವಾರ ನೆಗೆಟೀವ್ ವರದಿ ಪಡೆದಿದ್ದವರನ್ನೂ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ. 

ವೈದ್ಯರು ಹಾಗೂ ಅವರ ಸಂಪರ್ಕಿತರು ನೆಗೆಟೀವ್ ವರದಿ ದೃಢಪಡುವವರೆಗೆ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗುತ್ತದೆ. ಓಮಿಕ್ರಾನ್ ಪೀಡಿತ ವೈದ್ಯರು ಹಾಗೂ ಅವರ ಸಹೋದ್ಯೋಗಿಗಳಿಗೆ ರಕ್ತದೊತ್ತಡ ಹಾಗೂ ಆಕ್ಸಿಜನ್ ಮಟ್ಟ ಹಾಗೂ ಇತರೆ ಪ್ರಮುಖ ಆರೋಗ್ಯ ಅಂಶಗಳು ಸಹಜವಾಗಿದೆ.

ವೈದ್ಯರಿಗೆ ಮಧುಮೇಹ ಇದ್ದು, ಇನ್ನೂ ಪಾಸಿಟೀವ್ ಬರುತ್ತಿರುವುದಕ್ಕೆ ಇದೂ ಒಂದು ಕಾರಣ ಇರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಡೆಲ್ಟಾ ಹಾಗೂ ಇನ್ನಿತರ ರೂಪಾಂತರಿ ಸೋಂಕು ಪ್ರಕರಣಗಳಲ್ಲಿಯೂ ಈ ರೀತಿ ಆಗಿರುವ ಉದಾಹರಣೆಗಳಿವೆ. ಹಲವರಿಗೆ ಚಿಕಿತ್ಸೆಯ 21 ದಿನಗಳ ನಂತರ ಪಾಸಿಟೀವ್ ಬಂದಿರುವ ಉದಾಹರಣೆಗಳೂ ಇವೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT