ಅನ್ವರ್ ಮಾನಿಪ್ಪಾಡಿ 
ರಾಜ್ಯ

ವಕ್ಫ್ ಮಂಡಳಿ ಜಮೀನು ರಕ್ಷಿಸಿ ಇಲ್ಲವೇ ರಾಜಿನಾಮೆ ನೀಡಿ: ಶಶಿಕಲಾ ಜೊಲ್ಲೆಗೆ ಅನ್ವರ್ ಮಾಣಿಪ್ಪಾಡಿ ಎಚ್ಚರಿಕೆ

ವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ.

ಬೆಂಗಳೂರು: ವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  2013 ರ ವರದಿಯನ್ನು ಆಧರಿಸಿ ತನಿಖೆ ನಡೆಸಲು ಮತ್ತು ವಿಷಯವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಎಲ್ಲಾ ರಂಗಗಳಲ್ಲಿ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ ಮತ್ತು ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಪರಿಕಲ್ಪನೆಯನ್ನು ವಿಫಲಗೊಳಿಸಿದೆ ಎಂದು ಆರೋಪಿಸಿದ್ದಾರೆ.  ಈ ವಿಚಾರವನ್ನು ತಾವು  ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತ ಮುಕುಂದ್ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಬೇಕಾದ ಹಣಕ್ಕೆ ಕೊರತೆಯಿದೆ ಎಂದು ಹೇಳಿದ್ದಾರೆ.  ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗದಿದ್ದರೆ,  ಶಶಿಕಲಾ ಜೊಲ್ಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕುಎಂದು ಅವರು ಒತ್ತಾಯಿಸಿದ್ದಾರೆ.

ಜಗದೀಶ್ ಶೆಟ್ಟರ್ ಸಚಿವ ಸಂಪುಟ ನನ್ನ ವರದಿಗೆ ಅನುಮೋದನೆ ನೀಡಿತ್ತು. ಆದರೆ ಅಸೆಂಬ್ಲಿಯಲ್ಲಿ ಮಂಡನೆ ಆಗಿಲ್ಲ,ಅಲ್ಲದೆ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಕ್ರಮ ಕೈಗೊಳ್ಳುವ ಬದಲು ಕೇವಲ ತುಟಿಗೆ ತುಪ್ಪ ಸವರಿದರು ಎಂದು ವಾಗ್ದಾಳಿ ನಡೆಸಿದರು.

ಕಾನೂನು ಮತ್ತು ಸಂಸದೀ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರ ವಿರುದ್ದವೂ ವಾಗ್ದಾಳಿ ನಡೆಸಿದರು.  ಮೈಸೂರಿನಲ್ಲಿ ವಕ್ಫ್ ಆಸ್ತಿಯನ್ನು ಅಡಮಾನವಿಡಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ವಕ್ಫ್ ಆಸ್ತಿಯನ್ನು ಮಾರಾಟ ಮಾಡಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು.ಬೆಂಗಳೂರು ಸಮೀಪದ ದೊಡ್ಡನಾಗಮಂಗಲದಲ್ಲಿ ಮುಸಲ್ಮಾನರಿಗೂ ಸ್ಮಶಾನವನ್ನು ನಿರಾಕರಿಸಲಾಗುತ್ತಿದೆ" ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT