ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ 
ರಾಜ್ಯ

ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ

ಕ್ಯಾ. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು: ಬುಧವಾರ ಭಾರತೀಯ ಸೇನಾ ದಂಡನಾಯಕ ಬಿಪಿನ್ ರಾವತ್ ಅವರನ್ನು ಬಲಿಪಡೆದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಮಾಧ್ಯಮ ಸಿಬ್ಬಂದಿ ಪ್ರವೇಶವನ್ನು ನಿಷೇಧಿಸಲಾಗಿದೆ.  

ಹೆಲಿಕಾಪ್ಟರ್ ಅವಘಡದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದರು. ಮೂಲಗಳ ಪ್ರಕಾರ ಕ್ಯಾ. ವರುಣ್ ಸಿಂಗ್  ಅವರು ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರೂ, ಸ್ಥಿರವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅವರನ್ನು ಉಳಿಸಲು ಎಲ್ಲಾ ಬಗೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 11.48ರ ಸಮಯದಲ್ಲಿ ಟೇಕಾಫ್ ಆದ ಹೆಲಿಕಾಪ್ಟರ್ 10 ಕಿ.ಮೀ ದೂರದಲ್ಲಿ ಪತನಗೊಂಡಿತ್ತು. ಪತನಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ನತದೃಷ್ಟ ಹೆಲಿಕಾಪ್ಟರಿನಲ್ಲಿದ್ದ ಬ್ಲ್ಯಾಕ್ ಬಾಕ್ಸನ್ನು ಪತ್ತೆಹಚ್ಚಲಾಗಿದ್ದು ಪರಿಶೀಲನೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!