ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಮೇಶ್ ತಲೆಮರೆಸಿಕೊಂಡಿದ್ದಾನೆ.

ಪ್ರದೀಪ್ ಎಂಬಾತನ ಕೊಲೆಗೆ ಯತ್ನಿಸಿದ ಆರೋಪವಿದೆ. ಮೂವರೂ ಕನಕಪುರದ ಉಯ್ಯಂಬಳ್ಳಿಯ ಕಪನಿಗೌಡನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದಾರೆ.  

ವೇಗವಾಗಿ ಬಂದ ಕಾರು ಪ್ರದೀಪ್ ಎಂಬುವವರ ನಾಯಿಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿನ ಚಾಲಕನಿಗೆ ಪ್ರದೀಪ್ ಬುದ್ದಿ ಹೇಳಿ ಕಳಿಸಿದ್ದಾರೆ, ಚಾಲಕ ಕೂಡ ಕ್ಷಮೆ ಕೇಳಿ ಅಲ್ಲಿಂದ ಹೊರಟಿದ್ದಾನೆ.  ಕೆಲವು ಗಂಟೆಗಳ ನಂತರ ಪರಮೇಶ್ ಎಂಬಾತ ಪ್ರದೀಪ್ ಗೆ ಕರೆ ಮಾಡಿ ನಿಂದಿಸಿದ್ದ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಕೆಲವು ನಿಮಿಷಗಳ ನಂತರ, ಪ್ರದೀಪ್ ತನ್ನ ಸ್ನೇಹಿತನ ಮನೆಯ ಬಳಿ ಬಂದಾ, ಪರಮೇಶ್ ಮತ್ತು ಕಾರ್ತಿಕ್ ಸಿಂಗಲ್ ಬ್ಯಾರೆಲ್ ಗನ್ ಹಿಡಿದು ಬೈಕ್‌ನಲ್ಲಿ ಆಗಮಿಸಿದ್ದಾರೆ. ಕಾರ್ತಿಕ್ ಪ್ರದೀಪ್ ಕಡೆಗೆ ಗನ್ ತೋರಿಸಿ ಗುಂಡು ಹಾರಿಸಿದ್ದಾನೆ, ಆದರೆ ಪ್ರದೀಪ್ ತಪ್ಪಿಸಿಕೊಂಡಿದ್ದಾರೆ. ಮತ್ತೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಪ್ರದೀಪ್ ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಹೋಗಿದ್ದಾರೆ.

ಈ ಸಂಬಂಧ ಮಂಗಳವಾರ ದೂರು ದಾಖಲಾಗಿದ್ದು, ಕಾರ್ತಿಕ್ ನನ್ನು ಬಂಧಿಸಲಾಗಿದೆ. ಬಂದೂಕನ್ನು ವಶಪಡಿಸಿಕೊಂಡಿರುವ ಪೊಲೀಸರು ಪರಮೇಶನ ಪತ್ತೆಗೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT