ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಮೇಶ್ ತಲೆಮರೆಸಿಕೊಂಡಿದ್ದಾನೆ.

ಪ್ರದೀಪ್ ಎಂಬಾತನ ಕೊಲೆಗೆ ಯತ್ನಿಸಿದ ಆರೋಪವಿದೆ. ಮೂವರೂ ಕನಕಪುರದ ಉಯ್ಯಂಬಳ್ಳಿಯ ಕಪನಿಗೌಡನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದಾರೆ.  

ವೇಗವಾಗಿ ಬಂದ ಕಾರು ಪ್ರದೀಪ್ ಎಂಬುವವರ ನಾಯಿಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿನ ಚಾಲಕನಿಗೆ ಪ್ರದೀಪ್ ಬುದ್ದಿ ಹೇಳಿ ಕಳಿಸಿದ್ದಾರೆ, ಚಾಲಕ ಕೂಡ ಕ್ಷಮೆ ಕೇಳಿ ಅಲ್ಲಿಂದ ಹೊರಟಿದ್ದಾನೆ.  ಕೆಲವು ಗಂಟೆಗಳ ನಂತರ ಪರಮೇಶ್ ಎಂಬಾತ ಪ್ರದೀಪ್ ಗೆ ಕರೆ ಮಾಡಿ ನಿಂದಿಸಿದ್ದ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಕೆಲವು ನಿಮಿಷಗಳ ನಂತರ, ಪ್ರದೀಪ್ ತನ್ನ ಸ್ನೇಹಿತನ ಮನೆಯ ಬಳಿ ಬಂದಾ, ಪರಮೇಶ್ ಮತ್ತು ಕಾರ್ತಿಕ್ ಸಿಂಗಲ್ ಬ್ಯಾರೆಲ್ ಗನ್ ಹಿಡಿದು ಬೈಕ್‌ನಲ್ಲಿ ಆಗಮಿಸಿದ್ದಾರೆ. ಕಾರ್ತಿಕ್ ಪ್ರದೀಪ್ ಕಡೆಗೆ ಗನ್ ತೋರಿಸಿ ಗುಂಡು ಹಾರಿಸಿದ್ದಾನೆ, ಆದರೆ ಪ್ರದೀಪ್ ತಪ್ಪಿಸಿಕೊಂಡಿದ್ದಾರೆ. ಮತ್ತೊಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಪ್ರದೀಪ್ ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಹೋಗಿದ್ದಾರೆ.

ಈ ಸಂಬಂಧ ಮಂಗಳವಾರ ದೂರು ದಾಖಲಾಗಿದ್ದು, ಕಾರ್ತಿಕ್ ನನ್ನು ಬಂಧಿಸಲಾಗಿದೆ. ಬಂದೂಕನ್ನು ವಶಪಡಿಸಿಕೊಂಡಿರುವ ಪೊಲೀಸರು ಪರಮೇಶನ ಪತ್ತೆಗೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!