ಹರ್ಜಿಂದರ್ ಸಿಂಗ್ ಮತ್ತವರ ಪತ್ನಿ 
ರಾಜ್ಯ

ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ಮೃತಪಟ್ಟ ಲೆ.ಕ. ಹರ್ಜಿಂದರ್‌ ಸಿಂಗ್‌ ಕಾರ್ಕಳದ ಅಳಿಯ

ತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರತೀಯ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್‌ ಕರ್ನಲ್‌ ಹರ್ಜಿಂದರ್‌ ಸಿಂಗ್‌ ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ.

ಕಾರ್ಕಳ: ತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರತೀಯ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್‌ ಕರ್ನಲ್‌ ಹರ್ಜಿಂದರ್‌ ಸಿಂಗ್‌ ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ.

ಲೆಫ್ಟಿನೆಂಟ್‌ ಕರ್ನಲ್‌ ಹರ್ಜಿಂದರ್‌ ಸಿಂಗ್‌ ಅವರು ಕಾರ್ಕಳದ ಸಾಲ್ಮರ ಬಂಡಿಮಠ ನಿವಾಸಿ, ಕಾಂಗ್ರೆಸ್‌ ಮುಖಂಡ, ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ಫಿಲಿಫ್ ಮಿನೇಜಸ್‌ ಹಾಗೂ ಮೇರಿ ಮಿನೇಜಸ್‌ ದಂಪತಿಯ ಪುತ್ರಿ ಲೆಫ್ಟಿನೆಂಟ್‌ ಪ್ರಫುಲ್ಲಾ ಮಿನೇಜಸ್‌ ಅವರನ್ನು ವಿವಾಹವಾಗಿದ್ದರು.

ಫಿಲಿಪ್ ಮಿನೇಜಸ್‌ ಹಾಗೂ ಮೇರಿ ಮಿನೇಜಸ್‌ ದಂಪತಿಯ ನಾಲ್ವರು ಮಕ್ಕಳಲ್ಲಿ ಕೊನೆಯವಳಾದ ಆಗ್ನೇಸ್‌ ಪ್ರಫುಲ್ಲಾ ಮಿನೇಜಸ್‌ ಹಲವಾರು ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಆಕೆ 15 ವರ್ಷ ಹಿಂದೆ ಹರ್ಜಿಂದರ್‌ ಸಿಂಗ್‌ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಫಿಲಿಪ್ ಅವರ ಮೊದಲ ಮಗಳು ಪುಷ್ಪಾ ವಿದೇಶದಲ್ಲಿ ನೆಲೆಸಿದ್ದರು, ಆದರೆ ಮನೆ ಮತ್ತು ಅವರ ತಂದೆಯ ಸ್ಟೇಷನರಿ ಅಂಗಡಿಯನ್ನು ನೋಡಿಕೊಳ್ಳಲು ಸಲ್ಮಾರಾಗೆ ಮರಳಿದರು.  ಪ್ರಫುಲ್ಲ ಅವರು ಮೊದಲು ಸೇನೆಯಲ್ಲೆ ಕಾರ್ಯನಿರ್ವಸುತ್ತಿದ್ದರು.   ಇತ್ತೀಚೆಗೆ ಸ್ವಯಂ ನಿವೃತ್ತಿಯನ್ನು ಪಡೆದು ಸೇನಾ ಶಾಲೆಯಲ್ಲೇ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.  ನಾಲ್ಕು ವರ್ಷದ ಹಿಂದೆ ಹರ್ಜಿಂದರ್ ಸಿಂಗ್ ಕಾರ್ಕಳಕ್ಕೆ ಬಂದಿದ್ದರು. ಕೆಲ ವಾರಗಳ ಹಿಂದೆ ಪ್ರಫುಲ್ಲಾ ಕಾರ್ಕಳಕ್ಕೆ ಬಂದು ಕುಟುಂಬಸ್ಥರೊಂದಿಗೆ ಸಮಯ ಕಳೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT