ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಮಾರ್ಗಸೂಚಿ

ಕರ್ನಾಟಕದಲ್ಲಿ ಕೋವಿಡ್ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. 

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗಾಗಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. 

ಬೆಂಗಳೂರಿನಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿತ್ತು. ಓಮಿಕ್ರಾನ್ ರೋಗಿಗಳಿಗೆ ಚಿಕಿತ್ಸೆ ಪ್ರಕ್ರಿಯೆ, ಡಿಸ್ಚಾರ್ಜ್ ಆದ ನಂತರ ಹೇಗಿರಬೇಕು ಎಂಬುದಕ್ಕೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ ಎಂದು ಪ್ರತಿಪಕ್ಷಗಳು ತರಾಟೆಗೆ ತೆಗದುಕೊಂಡ ನಂತರ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಹೊಸ ಮಾರ್ಗಸೂಚಿ
ಓಮಿಕ್ರಾನ್‌ ಸೋಂಕಿಗೆ ಒಳಗಾದ ರೋಗಿಯು ಆರೋಗ್ಯ ಇಲಾಖೆಯ ಮಾನದಂಡಗಳನ್ನು ಪೂರೈಸಿದರೆ, 10 ದಿನಗಳ ನಂತರ ಅವರನ್ನು ಬಿಡುಗಡೆ ಮಾಡಬಹುದು. ಸತತ ಮೂರು ದಿನಗಳು ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ಸತತ ನಾಲ್ಕು ದಿನಗಳವರೆಗೆ ಆಮ್ಲಜನಕ ಮಟ್ಟ ಶೇ. 95 ಇದ್ದರೆ, 24 ಗಂಟೆ ಅವಧಿಯಲ್ಲಿ 2 ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದ್ದರೆ ಅಂತಹವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಬಹುದು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ವ್ಯಕ್ತಿ, ಒಂದು ವಾರದ ಅವಧಿಗೆ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT