ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ಪೇಜಾವರ ಶ್ರೀ ವಿರೋಧ

ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು...

ಉಡುಪಿ: ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಗುರುವಾರ ವಿರೋಧಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರವು ವ್ಯಕ್ತಿಯ ಆಯ್ಕೆಯಾಗಿದೆ ಮತ್ತು ಅದನ್ನು ಯಾರೂ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಪ್ರತಿಯೊಂದು ಸಮುದಾಯವೂ ತಮ್ಮದೇ ಆದ ಆಹಾರ ಪದ್ಧತಿಯನ್ನು ಅನುಸರಿಸುತ್ತಿದ್ದು, ಮಕ್ಕಳಿಗೆ ಮೊಟ್ಟೆ ನೀಡುವುದು ಸರ್ಕಾರದ ಕೆಲಸವಲ್ಲ ಎಂದರು.

ಶಾಲೆಗಳಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದು ಸಲಹೆ ಮಾಡಿದರು.

''ಮೊಟ್ಟೆ ಖರೀದಿಗೆ ಖರ್ಚು ಮಾಡಲು ಉದ್ದೇಶಿಸಿರುವ ಹಣವನ್ನು ಸರ್ಕಾರ ಮರುಪಾವತಿ ಮಾಡಲಿ. ಸಮುದಾಯಗಳ ಜೀವನ ಶೈಲಿ ಮತ್ತು ಪದ್ಧತಿಗಳನ್ನು ಬದಲಾಯಿಸಲು ಶಾಲೆಗಳು ಇಲ್ಲ. ಎಲ್ಲ ಸಮುದಾಯದ ಮಕ್ಕಳು ಶಾಲೆಗಳಲ್ಲಿ ಕಲಿಯುವುದರಿಂದ ಸರ್ಕಾರ ಮೊಟ್ಟೆ ತಿನ್ನುವುದನ್ನು ಕಡ್ಡಾಯ ಮಾಡಬಾರದು ಎಂದರು.

ಇದೇ ವೇಳೆ ರಾಜ್ಯ ಸರ್ಕಾರ ಮಂಡಿಸಿರುವ ಮತಾಂತರ ನಿಷೇಧ ಮಸೂದೆಗೆ ಸಂಬಂಧಿಸಿದಂತೆ ಮಾತನಾಡಿದ ಪೇಜಾವರ ಶ್ರೀಗಳು, ಮತಾಂತರದಿಂದ ಹಲವು ಕುಟುಂಬಗಳು ಹಾಳಾಗಿದ್ದು, ಇತ್ತೀಚಿಗೆ ಮಂಗಳೂರಿನಲ್ಲಿ ಇಡೀ ಕುಟುಂಬವೇ ನಾಶವಾಗಿರುವ ಘಟನೆ ಎಷ್ಟು ಕ್ರೂರವಾಗಿದೆ ಎಂಬುದನ್ನು ತೋರಿಸುತ್ತದೆ. ಇದು ನಿಲ್ಲಬೇಕು. ಹೀಗಾಗಿ ರಾಜ್ಯ ಸರ್ಕಾರ ಶೀಘ್ರವೇ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT