ಸಾಂಕೇತಿಕ ಚಿತ್ರ 
ರಾಜ್ಯ

ಕೆ-ರೇರಾಗೆ ಪೂರ್ಣಾವಧಿ ಕಾರ್ಯದರ್ಶಿ ಬೇಡಿಕೆಗೆ ಹೆಚ್ಚಿದ ಒತ್ತಡ

ರಿಯಲ್ ಎಸ್ಟೇಟ್ ಪ್ರಾಧಿಕಾರ (ಕೆ- ರೇರಾ)ಗೆ ಪೂರ್ಣಾವಧಿ ಕಾರ್ಯದರ್ಶಿಗಳ ನೇಮಕಕ್ಕೆ ಒತ್ತಡ ಹೆಚ್ಚಾಗುತ್ತಿದೆ. 

ಬೆಂಗಳೂರು: ರಿಯಲ್ ಎಸ್ಟೇಟ್ ಪ್ರಾಧಿಕಾರ (ಕೆ- ರೇರಾ)ಗೆ ಪೂರ್ಣಾವಧಿ ಕಾರ್ಯದರ್ಶಿಗಳ ನೇಮಕಕ್ಕೆ ಒತ್ತಡ ಹೆಚ್ಚಾಗುತ್ತಿದೆ. 

ಇದೇ ಬೇಡಿಕೆಯನ್ನು ಈಡೇರಿಸುವ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆಯುವುದಕ್ಕಾಗಿ ಆಸ್ತಿ ಖರೀದಿದಾರರನ್ನು ಪ್ರತಿನಿಧಿಸುವ ವೇದಿಕೆಯೊಂದು ಯೋಜನೆ ಸಿದ್ಧಪಡಿಸಿದೆ. ಕೆ-ರೇರಾದ ಹಾಲಿ ಕಾರ್ಯದರ್ಶಿ, ಐಎಎಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತೋಟಗಾರಿಕಾ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ. 

ಪೀಪಲ್ಸ್ ಕಲೆಕ್ಟೀವ್ ಎಫರ್ಟ್ಸ್ ಎಂಬ ವೇದಿಕೆಯ ಪ್ರಧಾನ ಕಾರ್ಯದರ್ಶಿ ಶಂಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, ಕೆ-ರೇರಾ ಸ್ಥಾಪನೆಯಾದಾಗಿನಿಂದಲೂ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಎರಡು ಜವಾಬ್ದಾರಿಗಳನ್ನು ಹೊಂದಿದ ವ್ಯಕ್ತಿಯನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು. 

ರೇರಾ ಕೆಲಸಗಳಿಗಾಗಿಯೇ ಪ್ರತ್ಯೇಕ ಕಾರ್ಯದರ್ಶಿಯನ್ನು ಹೊಂದುವುದು ಬಹಳ ಮುಖ್ಯವಾಗುತ್ತದೆ. ಈ ವಿಭಾಗದ ಕಾರ್ಯದರ್ಶಿಗಳು ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಮನ್ವಯ ಸಾಧಿಸಿ ರೇರಾ ಕಾಯ್ದೆಯ ಜಾರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಏಕಕಾಲದಲ್ಲಿ ಎರಡು ಹುದ್ದೆಗಳನ್ನು ನಿಭಾಯಿಸುವ ಅಧಿಕಾರಿಗಳಿಗೆ ರೇರಾ ಗೆ ಸಂಬಂಧಪಟ್ಟ ವಿಷಯಗಳಿಗೆ ನ್ಯಾಯ ಒದಗಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಶಂಕರ್ ಅಭಿಪ್ರಾಯಪಟ್ಟಿದ್ದಾರೆ. 

ಪ್ರೊಮೋಟರ್ ಗಳು ರೇರಾ ಆದೇಶಕ್ಕೆ ಬದ್ಧರಾಗಿರುವುದಿಲ್ಲ. ರೇರಾ ಕಾಯ್ದೆಯ ಸೆಕ್ಷನ್ 12, 14, 18 ಹಾಗೂ 19 ರ ಪ್ರಕಾರ ಗೃಹ ಖರೀದಿದಾರರಿಗೆ ಉಂಟಾಗಿದ್ದ ಸಮಸ್ಯೆಗೆ ಪರಿಹಾರ ನೀಡುವಂತೆ ಅಧಿಕಾರಿ ಪ್ರೊಮೋಟರ್ ಗಳಿಗೆ ಆದೇಶಿಸಿದ್ದರು. ಆದರೆ ಅವುಗಳನ್ನು ಪಾಲೆನ ಮಾಡಲಾಗುತ್ತಿಲ್ಲ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. 

ರೇರಾ ವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕಾಗಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಕಂದಾಯ ವಸೂಲಾತಿ ವಿಭಾಗವನ್ನೂ ಪ್ರಾರಂಭಿಸಬೇಕು ಎಂದು ಶಂಕರ್ ಅಭಿಪ್ರಾಯಪಟ್ಟಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT