ಸಂಗ್ರಹ ಚಿತ್ರ 
ರಾಜ್ಯ

ಆದೇಶವಿದ್ದರೂ ಹೈದರಾಬಾದ್ ಪ್ರವಾಸಕ್ಕೆ ಮಕ್ಕಳ ರವಾನೆ: ನಗರದ ಶಾಲೆ ವಿರುದ್ಧ ಸರ್ಕಾರ ಕೆಂಗಣ್ಣು

ಕೋವಿಡ್ -19 ಕಾರಣದಿಂದಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳ ಹೊರಡಿಸಿ ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ನೀಡಿದ್ದರೂ ನಗರದ ಶಾಲೆಯೊಂದು 122 ವಿದ್ಯಾರ್ಥಿಗಳನ್ನು 4 ದಿನಗಳ ಕಾಲ ಹೈದರಾಬಾದ್ ಪ್ರವಾಸಕ್ಕೆ ರವಾನಿಸಿ, ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ.

ಬೆಂಗಳೂರು: ಕೋವಿಡ್ -19 ಕಾರಣದಿಂದಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳ ಹೊರಡಿಸಿ ಪ್ರವಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡದಂತೆ ಶಾಲೆಗಳಿಗೆ ಆದೇಶ ನೀಡಿದ್ದರೂ ನಗರದ ಶಾಲೆಯೊಂದು 122 ವಿದ್ಯಾರ್ಥಿಗಳನ್ನು 4 ದಿನಗಳ ಕಾಲ ಹೈದರಾಬಾದ್ ಪ್ರವಾಸಕ್ಕೆ ರವಾನಿಸಿ, ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದೆ.

ಜಾಲಹಳ್ಳಿಯಲ್ಲಿರುವ ಪ್ರತಿಷ್ಠಿತ ಕ್ಲೂನಿ ಕಾನ್ವೆಂಟ್ ಶಾಲೆ ಸುಮಾರು 122 ವಿದ್ಯಾರ್ಥಿಗಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಬೆಂಗಳೂರು ಉತ್ತರ ಬ್ಲಾಕ್ ಶಿಕ್ಷಣಾಧಿಕಾರಿ ಟಿ ಎನ್ ಕಮಲಾಕರ ಅವರು ಪ್ರತಿಕ್ರಿಯೆ ನೀಡಿ, ಪ್ರವಾಸಕ್ಕೆ ಯಾವುದೇ ಪೂರ್ವಾನುಮತಿ ಪಡೆದಿಲ್ಲದ ಕಾರಣ ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಈಗಾಗಲೇ ಶಾಲಾ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದ್ದು, ಮಕ್ಕಳು ಎಲ್ಲಿದ್ದರೂ ಶೀಘ್ರಗತಿಯಲ್ಲಿ ಹಿಂತಿರುಗಲು ಆದೇಶಿಸುವಂತೆ ಪ್ರಿನ್ಸಿಪಾಲ್ ಮತ್ತು ಮ್ಯಾನೇಜ್‌ಮೆಂಟ್ ಇಬ್ಬರಿಗೂ ನಿರ್ದೇಶನ ನೀಡಿದ್ದೇವೆಂದು ಹೇಳಿದ್ದಾರೆ.

ಈವರೆಗೂ ಶಾಲೆಯ ವಿರುದ್ಧ ಯಾವುದೇ ಔಪಚಾರಿಕ ಕ್ರಮಗಳನ್ನು ತೆಗೆದುಕೊಂಡಿಲ್ಲ, ಕೇವಲ ವಿದ್ಯಾರ್ಥಿಗಳು ಹಿಂತಿರುಗುವಂತೆ ಆದೇಶಿಸಲಾಗಿದೆ. ಮುಂದಿನ ಕ್ರಮ ಕುರಿತು ಸೋಮವಾರ ಶಾಲೆಗೆ ಆದೇಶ ನೀಡಲಾಗುವುದು ಎಂದು ಕಮಲಾಕರ ತಿಳಿಸಿದ್ದಾರೆ.

"ಶುಕ್ರವಾರ ನಮಗೆ ಅನಾಮಧೇಯ ಕರೆ ಬಂದಿತ್ತು, ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಲು ಅಧಿಕಾರಿಗಳನ್ನು ಕಳುಹಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕಳುಹಿಸಿರುವುದು ಸ್ಪಷ್ಟವಾಗಿದೆ. ಪೋಷಕರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರದ ಅನುಮತಿ ಪಡೆಯದಿದ್ದರೂ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೂರು ಪ್ರತ್ಯೇಕ ಬಸ್ ಗಳು ಹಾಗೂ ಐವರು ಶಿಕ್ಷಕರೊಂದಿಗೆ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕೆರೆದುಕೊಂಡು ಹೋಗಿದ್ದಾರೆಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT