ಇಂಟರ್‌ನ್ಯಾಶನಲ್ ಫೆಡರೇಶನ್ ಆಫ್ ಕರ್ನಾಟಕ ಕ್ರಿಶ್ಚಿಯನ್ ಅಸೋಸಿಯೇಷನ್ಸ್ ಸಂಸ್ಥಾಪಕ ಅಧ್ಯಕ್ಷ ರೊನಾಲ್ಡ್ ಕೊಲಾಕೊ ಅವರು ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿರುವುದು. 
ರಾಜ್ಯ

ಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿ

ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.

ಬೆಂಗಳೂರು: ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.

ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ಕೆ.ಇ.ರಾಧಾಕೃಷ್ಣ, ಮೇಲ್ಮನೆ ಮಾಜಿ ಸದಸ್ಯ ಐವಾನ್ ಡಿಸೋಜಾ, ಎನ್‍ಆರ್‍ಐ ಉಪಾಧ್ಯಕ್ಷ ಆರತಿ ಕೃಷ್ಣ, ಮಾಜಿ ಶಾಸಕ ಜೆ.ಆರ್.ಲೋಬೋ ಹಾಗೂ ಕ್ರೈಸ್ತ ಸಮುದಾಯದ ರೂನಾಲ್ಡ್ ಕೊಲಾಸೊ ನೇತೃತ್ವದ ನಿಯೋಗ ನಿನ್ನೆಯಷ್ಟೇ ರೇಸ್ ಕೋರ್ಸ್ ರಸ್ತೆಯಲ್ಲಿನ ಸಿಎಂ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ಈ ಮಸೂದೆಯು ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಂಡು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುತ್ತಿರುವವರಿಗೆ ಪರವಾನಗಿ ನೀಡಿದಂತಾಗುತ್ತದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಕಳೆದ 10 ವರ್ಷಗಳಲ್ಲಿ ಕ್ರಿಶ್ಚಿಯನ್ ಜನಸಂಖ್ಯೆಯು ಶೇ.1.91ರಿಂದ ಶೇ.1.87ಕ್ಕೆ ಇಳಿಕೆಯಾಗಿದೆ ಎಂದು ನಿಯೋಗದಲ್ಲಿದ್ದ ಸದಸ್ಯರು ತಿಳಿಸಿದ್ದಾರೆ.

ನಿಯೋಗದ ಭಾಗವಾಗಿದ್ದ ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಅವರು ಮಸೂದೆಗೆ ತಮ್ಮ ವಿರೋಧದ ಬಗ್ಗೆ ಬೊಮ್ಮಾಯಿ ಅವರಿಗೆ ತಿಳಿಸಿದರು.

ಮಸೂದೆ ಸಚಿವ ಸಂಪುಟದ ಮುಂದೆ ಮಂಡಿಸಬೇಕಾಗಿರುವುದರಿಂದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧರಿಸಿಲ್ಲ ಎಂದು ಬೊಮ್ಮಾಯಿ ಉತ್ತರಿಸಿದ್ದಾರೆಂದು ಹೇಳಿದರು.

ಬಿಜೆಪಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಅವರು ಮಾತನಾಡಿ, ಮಸೂದೆಯನ್ನು ಖಾಸಗಿಯಾಗಿ ಮಂಡಿಸಲು ಸಿದ್ಧ ಎಂದಿದ್ದಾರೆ. ಸದಸ್ಯರ ಮಸೂದೆ. 24 ಪುಟಗಳ ಕರಡು ಸಿದ್ಧವಾಗಿದ್ದು, ಪರಿಷತ್ತಿನ ಅಧ್ಯಕ್ಷರ ಅನುಮತಿ ಕೋರಲಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿ, “ಸರ್ಕಾರವು ಮಸೂದೆಯನ್ನು ಮಂಡಿಸಿದರೆ, ನಾನು ಅದನ್ನು ಸ್ವಾಗತಿಸುತ್ತೇನೆ. ಮಸೂದೆಯಲ್ಲಿ ನನ್ನ ಕೆಲವು ಸಲಹೆಗಳನ್ನೂ ಸೇರಿಸುತ್ತದೆ ಎಂದು ನಂಬಿದ್ದೇನೆ. ಆದರೆ ನಾನು ಮಸೂದೆಯನ್ನು ಖಾಸಗಿ ಸದಸ್ಯರ ಮಸೂದೆಯಾಗಿ ಮಂಡಿಸಲು ಸಿದ್ಧನಿದ್ದೇನೆ. ಧಾರ್ಮಿಕ ಮತಾಂತರಗಳನ್ನು ಪರಿಶೀಲಿಸುವುದು ರಾಜ್ಯಕ್ಕೆ ನಿರ್ಣಾಯಕವಾಗಿದೆ, ಯಾವುದೇ ರೂಪದಲ್ಲಿ ಮಸೂದೆಯನ್ನು ಪರಿಚಯಿಸುವುದನ್ನು ಕಾಂಗ್ರೆಸ್ ಕಟುವಾಗಿ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಬಿಜೆಪಿ ಸರ್ಕಾರದ ಯಾವುದೇ ನಡೆ ವಿಶ್ವದ ಗಮನ ಸೆಳೆಯುತ್ತದೆ ಮತ್ತು ಅವರ ವರ್ಚಸ್ಸಿಗೆ ಹೊಡೆತ ಬೀಳಲಿದೆ. ನಗರದ ಹೂಡಿಕೆಯ ಮೇಲೂ ಪರಿಣಾಮ ಬೀರಲಿದೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT