ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ 
ರಾಜ್ಯ

ಪ್ರಧಾನಿ ಮೋದಿ ಜೊತೆಗೆ ಸಂವಾದಕ್ಕೆ ಸಿಗದ ಅವಕಾಶ: ಬೆಂಗಳೂರು ಠೇವಣಿದಾರರಿಗೆ ನಿರಾಸೆ

ನಿನ್ನೆ ನಡೆದ ಠೇವಣಿದಾರರಿಗೆ 5 ಲಕ್ಷ ರೂ.ಗಳ ವಿಮೆ ಹಣ ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಸಂವಾದ ನಡೆಸಲು ಅವಕಾಶ ಸಿಗದೆ ದಿವಾಳಿಗೊಳಗಾಗಿರುವ ಸಹಕಾರಿ ಬ್ಯಾಂಕುಗಳ ನೂರಾರು ಗ್ರಾಹಕರು ನಿರಾಸೆ ಅನುಭವಿಸಿದರು.

ಬೆಂಗಳೂರು: ನಿನ್ನೆ ನಡೆದ ಠೇವಣಿದಾರರಿಗೆ 5 ಲಕ್ಷ ರೂ.ಗಳ ವಿಮೆ ಹಣ ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಸಂವಾದ ನಡೆಸಲು ಅವಕಾಶ ಸಿಗದೆ ದಿವಾಳಿಗೊಳಗಾಗಿರುವ ಸಹಕಾರಿ ಬ್ಯಾಂಕುಗಳ ನೂರಾರು ಗ್ರಾಹಕರು ನಿರಾಸೆ ಅನುಭವಿಸಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರ ಸುತ್ತ ನೆರೆದಿದ್ದ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಸುಮಾರು 100 ಸಂಕಷ್ಟದಲ್ಲಿರುವ ಗ್ರಾಹಕರು, ತಮ್ಮ ಇಡೀ ಠೇವಣಿಯನ್ನು ವಾಪಸ್ ಕೊಡಿಸುವಂತೆ ಒತ್ತಾಯಿಸಿದರು. 

'ನಾನು ಸುಮಾರು 40 ಲಕ್ಷ ಹಣವನ್ನು ಕಳೆದುಕೊಂಡಿದ್ದು, ಪಡೆದಿರುವ 5 ಲಕ್ಷ ಏನೂ ಅಲ್ಲ ಎಂದು ಗ್ರಾಹಕ ಪ್ರತಾಪ್ ಹೇಳಿದರು. ತನ್ನ ಪತ್ನಿ ಭವಾನಿಯೊಂದಿಗಿನ ಜಂಟಿ ಖಾತೆಯಲ್ಲಿ 9 ಲಕ್ಷ ಠೇವಣಿ ಇಟ್ಟಿದೆ. ಆದರೆ, ಈಗ 5 ಲಕ್ಷ ಸಿಕ್ಕಿರುವುದಾಗಿ ಹೇಳಿದ ಮತ್ತೋರ್ವ ಠೇವಣಿದಾರ ಶೇಷಗಿರಿ ರಾವ್, ತಮ್ಮ ಕುಟುಂಬ ಸಂಕಷ್ಟದಲ್ಲಿದ್ದು, ಉಳಿದ ಹಣ ಕೂಡಾ ಬೇಕಾಗಿದೆ ಎಂದರು. ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಒದಗಿಸಬೇಕೆಂದು ಗ್ರಾಹಕರು ಪ್ರಹ್ಲಾದ್ ಜೋಶಿ ಹಾಗೂ ತೇಜಸ್ವಿ ಸೂರ್ಯ ಅವರನ್ನು ಒತ್ತಾಯಿಸಿದರು.

ರೇವಣಿ ವಿಮೆ ಹಣವನ್ನು 1 ಲಕ್ಷ ದಿಂದ 5 ಲಕ್ಷ ರೂಗೆ ಹೆಚ್ಚಿಸುವ ಉದ್ದೇಶವನ್ನು ಡೆಪಾಸಿಟ್ ಇನ್ಸೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ( ಡಿಐಸಿಜಿಸಿ) ಕಾಯ್ದೆ ಹೊಂದಿರುವುದಾಗಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ವಿವರಿಸಿದರು. ಮಧ್ಯಂತರ ಪರಿಹಾರವಾಗಿ ಮೊದಲ ಕಂತಿನ ಹಣವನ್ನು ನವೆಂಬರ್ 29, 2021ರಲ್ಲಿ ಡಿಐಸಿಜಿಸಿ ಬಿಡುಗಡೆ ಮಾಡಿದೆ. 

ಪ್ರಧಾನಿ ಮೋದಿ ಜೊತೆಗೆ ವಿಡಿಯೋ ಸಂವಾದ ರದ್ದುಗೊಂಡ ಬಳಿಕ ಗ್ರಾಹಕರು ನಿರಾಸೆ ವ್ಯಕ್ತಪಡಿಸಿದರು. ಆಯ್ದು ಫಲಾನುಭವಿಗಳಿಗೆ 5 ಲಕ್ಷ ರೂ.ಗಳ ಚೆಕ್ ನ್ನು ಲೀಡ್ ಬ್ಯಾಂಕ್ ಅಧಿಕಾರಿಗಳು ಹಸ್ತಾಂತರಿಸಿದರು. ಬೆಂಗಳೂರು ಸೆಂಟ್ರಲ್ ಲೋಕಸಭಾ ಸಂಸದ ಪಿ. ಸಿ. ಮೋಹನ್ ಮತ್ತಿತರರು ಉಪಸ್ಥಿತರಿದ್ದರು. ಬಾಗಲಕೋಟೆಯ ಮುಧೋಳ್ ಸಹಕಾರಿ ಬ್ಯಾಂಕ್, ದಾವಣಗೆರೆಯ ಮಿಲ್ಲತ್ ಕೋ- ಆಪರೇಟಿವ್ ಬ್ಯಾಂಕ್, ಚಿತ್ರದುರ್ಗ ಮತ್ತು ವಿಜಯಪುರದ ಡೆಕ್ಕನ್ ಅರ್ಬನ್  ಸಹಕಾರಿ ಬ್ಯಾಂಕಿನ ಗ್ರಾಹಕರು ವರ್ಚುಯಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

ವಾರ ಭವಿಷ್ಯ: ದ್ವಾದಶ ರಾಶಿಗಳ ಫಲಾಫಲ

SCROLL FOR NEXT