ಬೆಂಗಳೂರು: ಗ್ರಾಹಕರ ವೇದಿಕೆ ನಗರದ ಶ್ರವಣ ಕ್ಲಿನಿಕ್ ಒಂದಕ್ಕೆ 3 ಲಕ್ಷ ರೂ.ಗಳನ್ನು ದೂರುದಾರಿಗೆ ನೀಡುವಂತೆ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಕಾರಿನ ಉತ್ಪಾದನಾ ದೋಷ: ಬೆಂಗಳೂರಿನ ಉದ್ಯಮಿಗೆ ಪರಿಹಾರ ಹಣ ನೀಡುವಂತೆ ಫೋರ್ಡ್ ಇಂಡಿಯಾಗೆ ಗ್ರಾಹಕ ವೇದಿಕೆ ಆದೇಶ
ಸುದೀಪ್ ಹೇಮಾರೆಡ್ಡಿ ಎಂಬುವವರು ಕ್ಲಿನಿಕ್ ವಿರುದ್ಧ ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿದ್ದರು. ಮಾರ್ಚ್ 2019ರಲ್ಲಿ ಸುದೀಪ್ ಕ್ಲಿನಿಕ್ ನಿಂದ ಶ್ರವಣ ಸಾಧನವೊಂದನ್ನು ಖರೀದಿಸಿದ್ದರು. ಅದರ ಮೊತ್ತ 2.5 ಲಕ್ಷ ರೂ. ಅದರಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಸಾಧನವನ್ನು ಪಡೆದುಕೊಂಡಿದ್ದರು. ಆದರೆ ಅದರಲ್ಲೂ ದೋಷ ಕಂಡು ಬಂದಿತ್ತು.
ಇದನ್ನೂ ಓದಿ: ಗ್ರಾಹಕ ನ್ಯಾಯಾಲಯಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್: ಸುಪ್ರೀಂ ಎಚ್ಚರಿಕೆ
ಎರಡನೇ ಸಾಧನವನ್ನು ಬದಲಾಯಿಸಿಕೊಡುವಂತೆ ಕೇಳಿಕೊಂಡಾಗ ಕ್ಲಿನಿಕ್ ಮಂದಿ ನಿರಾಕರಿಸಿದ್ದರು. ಅಲ್ಲದೆ 2.5 ಲಕ್ಷ ಹಣವನ್ನು ಮರಳಿಸಲೂ ನಿರಾಕರಿಸಿದರು. ಆಗ ಸುದೀಪ್ ಗ್ರಾಹಕರ ವೇದಿಕೆಗೆ ದೂರು ನೀಡಿದ್ದರು.
ವಿಚಾರಣೆಯಲ್ಲಿ ಕ್ಲಿನಿಕ್ ತಪ್ಪು ಎಸಗಿರುವುದು ಸಾಬೀತಾಗಿತ್ತು. ಹೀಗಾಗಿ ಸಾಧನದ ಶುಲ್ಕ ಸೇರಿದಂತೆ 50,000 ಪರಿಹಾರ ಸೇರಿ ಒಟ್ಟು 3 ಲಕ್ಷ ರೂ.ಗಳನ್ನು ದೂರುದಾರರಿಗೆ ಪಾವತಿಸುವಂತೆ ವೇದಿಕೆ ಕ್ಲಿನಿಕ್ಕಿಗೆ ನಿರ್ದೇಶನ ನೀಡಿದೆ.