ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಚಿನ್ನದ ಸರ ಕಳ್ಳತನ, ಆಸ್ಪತ್ರೆ ಸಿಬ್ಬಂದಿ ಬಂಧನ

ಕೋವಿಡ್ ಚಿಕಿತ್ಸೆಗಾಗಿ ಆಡ್ಮಿಟ್ ಆಗಿದ್ದ ವೃದ್ದ ಮಹಿಳೆಯಿಂದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದ ಖಾಸಗಿ ಆಸ್ಪತ್ರೆಯ 27 ವರ್ಷದ ಸಿಬ್ಬಂದಿಯೊಬ್ಬರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಕೋವಿಡ್ ಚಿಕಿತ್ಸೆಗಾಗಿ ಆಡ್ಮಿಟ್ ಆಗಿದ್ದ ವೃದ್ದ ಮಹಿಳೆಯಿಂದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದ ಖಾಸಗಿ ಆಸ್ಪತ್ರೆಯ 27 ವರ್ಷದ ಸಿಬ್ಬಂದಿಯೊಬ್ಬರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಚಿತ್ರದುರ್ಗದ ಮೂಲದ ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಹೆಸರುಘಟ್ಟದಲ್ಲಿ ವಾಸಿಸುತ್ತಿದ್ದ ಈಕೆ ಐಸಿಯುನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. 

ಸರ ಕಳ್ಳತನದ ಬಗ್ಗೆ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಮಹಿಳೆಯ ಕುಟುಂಬ ಸದಸ್ಯರು ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ತನಿಖೆ ನಡೆಸಿದಾಗ ಸರ ಕಳ್ಳತನದಲ್ಲಿ ಇಮ್ತಿಯಾಜ್ ಪಾತ್ರ ಪತ್ತೆಯಾಯಿತು. ಅಪರಾಧದ ನಂತರ ಆತ ಕೆಲಸ ಬಿಟ್ಟು, ತಲೆ ಮರೆಸಿಕೊಂಡಿದ್ದ. ಆತನ ಚಲನವಲನ ಪತ್ತೆ ಹಚ್ಚಿದ ಪೊಲೀಸರು, ಶನಿವಾರ ಬಂಧಿಸಿದ್ದಾರೆ. 

ಇಂಜೆಕ್ಷನ್ ಪಡೆದ ನಂತರ ರೋಗಿ ಮಲಗುವುದನ್ನೆ ಕಾಯುತ್ತಿದ್ದ ಆರೋಪಿ, ನಂತರ ಆಕೆಯ ಕತ್ತಿನಿಂದ ಸುಮಾರು 3 ಲಕ್ಷ ರೂ. ಮೌಲ್ಯದ 70 ಗ್ರಾಮ್ ಚಿನ್ನದ ಸರವನ್ನು ಕದ್ದು, ಅದನ್ನು 2.38 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾಗಿ ಆರೋಪಿ ತಪೊಪ್ಪಿಕೊಂಡಿದ್ದಾನೆ. ಆರೋಪಿ ನೀಡಿದ ಮಾಹಿತಿ ಆಧಾರದ ಮೇಲೆ ಕಳವು ಮಾಡಲಾಗಿದ್ದ ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT