ಸಚಿವ ಈಶ್ವರಪ್ಪ 
ರಾಜ್ಯ

ಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಆಗಮಿಸಿದ್ದ ಈಶ್ವರಪ್ಪ ಮಾದ್ಯಮದವರೊಂದಿಗೆ ಮಾತನಾಡುತ್ತಾ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಪ್ರಸ್ತಾಪಿಸಿ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರ, ಈ ವಿಚಾರವನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‍ಗೆ ಸದನದಲ್ಲೆ ಪ್ರಶ್ನೆ ಮಾಡುತ್ತೇನೆ ಎಂದರು.

ಪಾಕಿಸ್ತಾನದಲ್ಲಿ 24% ಹಿಂದುಗಳನ್ನ ಕೇವಲ 3% ತಂದು ನಿಲ್ಲಿಸಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ವ? ಯಾವುದೇ ಕಾರಣಕ್ಕೂ ಆಸೆ ಆಕಾಂಕ್ಷೆಗಳನ್ನು ತೋರಿಸಿ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ತರ್ತೇವೆ ಲವ್ ಜಿಹಾದಿ, ಮತಾಂತರ ನಿಷೇಧ ಕಾಯ್ದೆ ಭಾರತೀಯ ಜನತಾ ಪಾರ್ಟಿ ಒಪ್ಪುವುದಿಲ್ಲ ಜೊತೆಗೆ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದ ಹೇಳಿದರು.

ರಾಹುಲ್ ಗಾಂಧಿ ಹಿಂದು ಅಂತ ಹೇಳಿಕೆ ನೀಡಿದ್ದರೆ ಸಂತೋಷ, ಆದರೆ ಇದೆಲ್ಲ ಚುನಾವಣೆಯಲ್ಲಿ ಹಿಂದು ಮತ್ತು ಮುಸಲ್ಮಾನರ ಮತ ಪಡೆದುಕೊಳ್ಳಲು ಇವರು ಆಡ್ತಾ ಇರೋ ಪ್ರಚಾರದ ನಾಟಕ ಎಂದು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT