ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ 
ರಾಜ್ಯ

ಬೆಳಗಾವಿ ಅಧಿವೇಶನ: ರೈತರ ಸಂಕಷ್ಟವನ್ನು ಸಭೆಯ ಮುಂದಿಟ್ಟ ಸಿದ್ದರಾಮಯ್ಯ, ಬೆಳೆ ಹಾನಿಗೆ ಮೂರು ಪಟ್ಟು ಪರಿಹಾರಕ್ಕೆ ಆಗ್ರಹ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಸಭೆಯ ಮುಂದಿಟ್ಟರು.

ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಸಭೆಯ ಮುಂದಿಟ್ಟರು.

ರಾಜ್ಯದಲ್ಲಿ ಕೊಯ್ಲಿಗೆ ಬಂದ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ 60 ವರ್ಷಗಳಲ್ಲಿ ಕಾಣದಂತಹ ಮಳೆಯನ್ನು ಈ ಬಾರಿ ರಾಜ್ಯ ಕಂಡಿದೆ ಎಂದು ಸಿದ್ದರಾಮಯ್ಯ ಸಭೆಯ ಗಮನ ಸೆಳೆದರು.

2019ರಲ್ಲಿ ಉತ್ತರ ಕರ್ನಾಟಕದಲ್ಲಿ ಅತ್ಯಧಿಕ ಮಳೆ ಬಿದ್ದಿದೆ. ಈ ವೇಳೆ 2 ಲಕ್ಷ 76 ಸಾವಿರ ಮನೆಗಳು ಹಾನಿಯಾಗಿವೆ. ಆದರೆ, ಮನೆ ಕಳೆದುಕೊಂಡ 1 ಲಕ್ಷ 33 ಸಾವಿರ ಕುಟುಂಬಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ. ಉಳಿದವರಿಗೆ ನೆರವು ದೊರೆತಿಲ್ಲ ಎಂದು ಅಪಾದಿಸಿದರು. ಗೋಕಾಕ್, ರಾಯಭಾಗ ತಾಲೂಕುಗಳಿಗೆ ಭೇಟಿ ನೀಡಿದಾಗ 50ಕ್ಕೂ ಹೆಚ್ಚು ಮಹಿಳೆಯರು ಪರಿಹಾರ ಸಿಗದಿದ್ದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಎನ್ ಡಿಆರ್ ಎಫ್ ನಿಯಮ ಪರಿಷ್ಕರಿಸಬೇಕು: ಎನ್ ಡಿಆರ್ ಎಫ್ ನಿಯಮದ ಪ್ರಕಾರ ಶೇಕಡಾ 33ಕ್ಕಿಂತ ಅಧಿಕ ಬೆಳೆ ಹಾನಿಯಾಗಿದ್ದರೆ ಮಾತ್ರ ಪರಿಹಾರ ನೀಡಲು ಪರಿಗಣಿಸಲಾಗುತ್ತದೆ. ಶೇ. 32. 99 ರಷ್ಟು ಹಾನಿಯಾದರೆ ಎನ್ ಡಿಆರ್ ಎಫ್ ಪರಿಗಣಿಸಲ್ಲ. ಅಲ್ಲದೇ, ಕೇವಲ ಜಮೀನಿನಲ್ಲಿ ಬೆಳೆದು ನಿಂತ ಬೆಳೆಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಆದರೆ, ರಾಶಿ ಮಾಡಿದ ಧಾನ್ಯಗಳು ಮಳೆಗೆ ತುತ್ತಾದರೆ ರೈತರಿಗೆ ಪರಿಹಾರ ಸಿಗಲ್ಲ. ಈ ನಿಯಮಗಳು ಬದಲಾಗಬೇಕು ಎಂದ ಸಿದ್ದರಾಮಯ್ಯ, 20 ವರ್ಷಗಳ ಹಿಂದೆ ಜಾರಿಗೆ ಬಂದಿರುವ ಎನ್ ಡಿಆರ್ ಎಫ್ ನ್ನು ಈವರೆಗೆ ಪರಿಷ್ಕರಿಸಿಲ್ಲ. ರಾಜ್ಯ ಸರ್ಕಾರ ಇದನ್ನು ಪರಿಷ್ಕರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಒಣ ಬೇಸಾಯದಲ್ಲಿನ 1 ಹೆಕ್ಟೇರ್ ಜಮೀನಿಗೆ 6,800 ರೂ, ನೀರಾವರಿ  ಪ್ರದೇಶದ 1 ಹೆಕ್ಟೇರ್ ಜಮೀನಿಗೆ 13,500 ರೂ. ತೋಟಗಾರಿಕೆ ಬೇಸಾಯದಲ್ಲಿನ 1 ಹೆಕ್ಟೇರ್ ಪ್ರದೇಶಕ್ಕೆ 18 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಇದನ್ನು ಮೂರು ಪಟ್ಟು ಹೆಚ್ಚಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟರು.

ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಇಲ್ಲ: ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೇ ಇಲ್ಲ ಎಂದು ರಾಜ್ಯ ಸರ್ಕಾರವನ್ನು ಚುಚ್ಚಿದ ಸಿದ್ದರಾಮಯ್ಯ, ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಲ್ಲಿ ಅತಿವೃಷ್ಟಿ ಸಂಭವಿಸಿದೆ. 13 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಇಂದು ಮಾಹಿತಿ ನೀಡಿರುವುದಾಗಿ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್