ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ 
ರಾಜ್ಯ

ಬೆಳಗಾವಿ ಅಧಿವೇಶನ: ರೈತರ ಸಂಕಷ್ಟವನ್ನು ಸಭೆಯ ಮುಂದಿಟ್ಟ ಸಿದ್ದರಾಮಯ್ಯ, ಬೆಳೆ ಹಾನಿಗೆ ಮೂರು ಪಟ್ಟು ಪರಿಹಾರಕ್ಕೆ ಆಗ್ರಹ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಸಭೆಯ ಮುಂದಿಟ್ಟರು.

ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಸಭೆಯ ಮುಂದಿಟ್ಟರು.

ರಾಜ್ಯದಲ್ಲಿ ಕೊಯ್ಲಿಗೆ ಬಂದ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ 60 ವರ್ಷಗಳಲ್ಲಿ ಕಾಣದಂತಹ ಮಳೆಯನ್ನು ಈ ಬಾರಿ ರಾಜ್ಯ ಕಂಡಿದೆ ಎಂದು ಸಿದ್ದರಾಮಯ್ಯ ಸಭೆಯ ಗಮನ ಸೆಳೆದರು.

2019ರಲ್ಲಿ ಉತ್ತರ ಕರ್ನಾಟಕದಲ್ಲಿ ಅತ್ಯಧಿಕ ಮಳೆ ಬಿದ್ದಿದೆ. ಈ ವೇಳೆ 2 ಲಕ್ಷ 76 ಸಾವಿರ ಮನೆಗಳು ಹಾನಿಯಾಗಿವೆ. ಆದರೆ, ಮನೆ ಕಳೆದುಕೊಂಡ 1 ಲಕ್ಷ 33 ಸಾವಿರ ಕುಟುಂಬಗಳಿಗೆ ಮಾತ್ರ ಪರಿಹಾರ ಸಿಕ್ಕಿದೆ. ಉಳಿದವರಿಗೆ ನೆರವು ದೊರೆತಿಲ್ಲ ಎಂದು ಅಪಾದಿಸಿದರು. ಗೋಕಾಕ್, ರಾಯಭಾಗ ತಾಲೂಕುಗಳಿಗೆ ಭೇಟಿ ನೀಡಿದಾಗ 50ಕ್ಕೂ ಹೆಚ್ಚು ಮಹಿಳೆಯರು ಪರಿಹಾರ ಸಿಗದಿದ್ದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಎನ್ ಡಿಆರ್ ಎಫ್ ನಿಯಮ ಪರಿಷ್ಕರಿಸಬೇಕು: ಎನ್ ಡಿಆರ್ ಎಫ್ ನಿಯಮದ ಪ್ರಕಾರ ಶೇಕಡಾ 33ಕ್ಕಿಂತ ಅಧಿಕ ಬೆಳೆ ಹಾನಿಯಾಗಿದ್ದರೆ ಮಾತ್ರ ಪರಿಹಾರ ನೀಡಲು ಪರಿಗಣಿಸಲಾಗುತ್ತದೆ. ಶೇ. 32. 99 ರಷ್ಟು ಹಾನಿಯಾದರೆ ಎನ್ ಡಿಆರ್ ಎಫ್ ಪರಿಗಣಿಸಲ್ಲ. ಅಲ್ಲದೇ, ಕೇವಲ ಜಮೀನಿನಲ್ಲಿ ಬೆಳೆದು ನಿಂತ ಬೆಳೆಯನ್ನು ಮಾತ್ರ ಪರಿಗಣಿಸಲಾಗುತ್ತದೆ. ಆದರೆ, ರಾಶಿ ಮಾಡಿದ ಧಾನ್ಯಗಳು ಮಳೆಗೆ ತುತ್ತಾದರೆ ರೈತರಿಗೆ ಪರಿಹಾರ ಸಿಗಲ್ಲ. ಈ ನಿಯಮಗಳು ಬದಲಾಗಬೇಕು ಎಂದ ಸಿದ್ದರಾಮಯ್ಯ, 20 ವರ್ಷಗಳ ಹಿಂದೆ ಜಾರಿಗೆ ಬಂದಿರುವ ಎನ್ ಡಿಆರ್ ಎಫ್ ನ್ನು ಈವರೆಗೆ ಪರಿಷ್ಕರಿಸಿಲ್ಲ. ರಾಜ್ಯ ಸರ್ಕಾರ ಇದನ್ನು ಪರಿಷ್ಕರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಒಣ ಬೇಸಾಯದಲ್ಲಿನ 1 ಹೆಕ್ಟೇರ್ ಜಮೀನಿಗೆ 6,800 ರೂ, ನೀರಾವರಿ  ಪ್ರದೇಶದ 1 ಹೆಕ್ಟೇರ್ ಜಮೀನಿಗೆ 13,500 ರೂ. ತೋಟಗಾರಿಕೆ ಬೇಸಾಯದಲ್ಲಿನ 1 ಹೆಕ್ಟೇರ್ ಪ್ರದೇಶಕ್ಕೆ 18 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಇದನ್ನು ಮೂರು ಪಟ್ಟು ಹೆಚ್ಚಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟರು.

ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಇಲ್ಲ: ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೇ ಇಲ್ಲ ಎಂದು ರಾಜ್ಯ ಸರ್ಕಾರವನ್ನು ಚುಚ್ಚಿದ ಸಿದ್ದರಾಮಯ್ಯ, ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಲ್ಲಿ ಅತಿವೃಷ್ಟಿ ಸಂಭವಿಸಿದೆ. 13 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಇಂದು ಮಾಹಿತಿ ನೀಡಿರುವುದಾಗಿ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT