ಕಂದಾಯ ಸಚಿವ ಆರ್.ಅಶೋಕ್ 
ರಾಜ್ಯ

ಶೀಘ್ರದಲ್ಲೇ ಎರಡು ಸಾವಿರ ಭೂ ಮಾಪಕರ ನೇಮಕ: ಕಂದಾಯ ಸಚಿವ ಆರ್ ಅಶೋಕ್

ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ...

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಬುಧವಾರ ವಿಧಾನಪರಿಷತ್ ಗೆ ತಿಳಿಸಿದರು.

ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಸೀಲ್ದಾರರಿಗೆ ಪ್ರತ್ಯಾಯೋಜಿಸಲಾಗಿದೆ ಎಂದರು.

2019ರ ಜನೆವರಿ 1ರಿಂದ 2021ರ ನವೆಂಬರ್ 30ರವರೆಗೆ ಕಂದಾಯ ಅದಾಲತ್‍ನಲ್ಲಿ ಆರ್‍ಟಿಸಿ ತಿದ್ದುಪಡಿಯ ಬಗ್ಗೆ 193687 ಅರ್ಜಿಗಳು ಸ್ವೀಕೃತವಾಗಿದ್ದು, ಮೋಜಿಣಿ ವ್ಯವಸ್ಥೆ ಅಡಿ 373234 ಆರ್‍ಟಿಸಿ ತಿದ್ದುಪಡಿಯ ಬಗ್ಗೆ ಸ್ವೀಕೃತವಾಗಿರುತ್ತದೆ. ಈ ಪೈಕಿ ಕಂದಾಯ ಅದಾಲತ್‍ನಲ್ಲಿ 193687 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ವಿವರಿಸಿದರು.

ಮೋಜಿಣಿ ವ್ಯವಸ್ಥೆ ಅಡಿ 207589 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. 165645 ಅರ್ಜಿಗಳು ತಿದ್ದುಪಡಿಗೆ ಬಾಕಿ ಇವೆ ಎಂದು ಅವರು ತಿಳಿಸಿದರು.

ಹಕ್ಕು ದಾಖಲೆ ತಿದ್ದುಪಡಿ(ಆರ್‍ಆರ್‍ಟಿ)ಯನ್ನು ಆನ್‍ಲೈನ್ ಅಥವಾ ಸಕಾಲ ವ್ಯಾಪ್ತಿಗೆ ತರಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಅಶೋಕ್ ಅವರು, ಹಕ್ಕು ದಾಖಲೆ ತಿದ್ದುಪಡಿ ಅನಗತ್ಯ ವಿಳಂಬ ಹಾಗೂ ಭ್ರಷ್ಟಾಚಾರ ತಾಂಡವಾಡುತ್ತಿರುವುದರ ಕುರಿತ ದೂರುಗಳು ಬಂದಲ್ಲಿ ಡಿಸಿ/ಎಸಿಗಳಿಂದ ತನಿಖಾ ವರದಿ ಪಡೆದು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ವಿಶೇಷ ಸಭೆ ಕರೆದು ಸಮಸ್ಯೆಗೆ ಪರಿಹಾರ, ಪಹಣಿ, ಭೂ ಮಂಜೂರಾತಿ, ಹಕ್ಕು ತಿದ್ದುಪಡಿಯಂತ ಸಮಸ್ಯೆಗಳು ಕಳೆದ 40 ವರ್ಷಗಳಿಂದಿವೆ. ಮಂಜೂರಾತಿ(ಗ್ರ್ಯಾಂಟ್)ಪತ್ರ ಒಬ್ಬರಿಗಿದ್ದರೇ ಭೂಮಿಯಲ್ಲಿ ಮತ್ತೊಬ್ಬರು ವ್ಯವಸಾಯ ಮಾಡುತ್ತಿದ್ದಾರೆ; ಯಾರಿಗೆ ಅದರ ಒಡೆತನ ನೀಡಬೇಕೆಂಬುದೇ ನಮ್ಮ ಮುಂದಿರುವ ದೊಡ್ಡ ಸವಾಲು ಎಂದು ಸದನದಲ್ಲಿ ತಿಳಿಸಿದ ಸಚಿವ ಅಶೋಕ್, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವಿಶೇಷ ಸಭೆ ಕರೆಯಲು ತಿಳಿಸಿದ್ದು, ಅವರ ಅಭಿಪ್ರಾಯಗಳನ್ನು ಸಹ ಆಲಿಸಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಮತ್ತೆ 2 ಸಾವಿರ ಪರವಾನಿಗೆ ಭೂಮಾಪಕರ ನೇಮಕ
ಈಗಾಗಲೇ 841 ಪರವಾನಿಗೆ ಭೂಮಾಪಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಮತ್ತೆ 2 ಸಾವಿರ ಪರವಾನಿಗೆ ಭೂಮಾಪಕರನ್ನು ನೇಮಕ ಮಾಡಿಕೊಳ್ಳಲು ಶೀಘ್ರ ಕ್ರಮವಹಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಸಂದರ್ಭದಲ್ಲಿ ಸದನಕ್ಕೆ ತಿಳಿಸಿದರು.

ಇಲಾಖೆಯಲ್ಲಿ ಈಗಾಗಲೇ 3500 ಭೂಮಾಪಕರಿದ್ದಾರೆ. ಹೊಸದಾಗಿ ನೇಮಿಸಿಕೊಳ್ಳುವ ಪರವಾನಿಗೆ ಭೂಮಾಪಕರನ್ನು ಸೇರಿದಂತೆ ಎಲ್ಲರನ್ನು ಬಳಸಿಕೊಂಡು ನಾಲ್ಕೈದು ತಿಂಗಳಲ್ಲಿ ಬಾಕಿ ಇರುವ ಭೂಸರ್ವೆ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT