ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮತ್ತು ಸೇನಾ ಹೆಲಿಕಾಪ್ಟರ್ ದುರಂತದ ಸಂಗ್ರಹ ಚಿತ್ರ 
ರಾಜ್ಯ

ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪ

ತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ.

ಬೆಂಗಳೂರು: ತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ.ಭಾರತೀಯ ವಾಯುಪಡೆ ಅವರ ಸಾವನ್ನು ಖಚಿತಪಡಿಸಿದೆ. 

ಹೆಲಿಕಾಪ್ಟರ್ ದುರಂತದಲ್ಲಿ ಶರೀರದ ಬಹುತೇಕ ಭಾಗ ಸುಟ್ಟ ಗಾಯಗಳಾಗಿ ಪೈಲಟ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ಅವರಿಗೆ ಆರಂಭದಲ್ಲಿ ತಮಿಳು ನಾಡಿನ ವೆಲ್ಲಿಂಗ್ಟನ್ ನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

ಪ್ರಧಾನಿ ಸಂತಾಪ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕಳೆದ ವಾರ ತಮಿಳು ನಾಡಿನ ಕೂನ್ನೂರು ಬಳಿ ದುರಂತಕ್ಕೀಡಾಗಿ 13 ಮಂದಿ ಸಜೀವ ದಹನವಾಗಿದ್ದರು. ಇದೀಗ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ವಿಧಿವಶರಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT