ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಅಂತರಾಜ್ಯ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ತಪಾಸಣೆ ಮರು ಜಾರಿ ಮಾಡುವಂತೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಅಂತರಾಜ್ಯ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ತಪಾಸಣೆ ಮರು ಜಾರಿ ಮಾಡುವಂತೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಕೇರಳದಿಂದ ಬರುವವರಿಗೆ ಮಾತ್ರ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ದಿನ ಕಳೆದಂತೆ ಸೋಂಕು ಹೆಚ್ಚಾಗುತ್ತಿದೆ. ಈ ಕುರಿತು ಪ್ರತೀನಿತ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಲಾಗುತ್ತಿದೆ. ಈಗಾಗಲೇ ನಮ್ಮ ಸಲಹೆಗಳಿಗೆ ಇತರೆ ಅಧಿಕಾರಿಗಳು ಒಪ್ಪಿಗೆ ನೀಡಿದ್ದು, ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಅಂತರರಾಜ್ಯಗಳಿಂದ ಬಂದವರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ತರುವುದನ್ನು ಕಡ್ಡಾಯಗೊಳಿಸಬಕು. ಇದರಿಂದ ಹೆಚ್ಚೆಚ್ಚು ಜನರು ಲಸಿಕೆ ಪಡೆಯುವಂತಾಗುತ್ತದೆ. ಇದರ ಜೊತೆಗೆ ರಾಜ್ಯಕ್ಕೆ ಬರುವವರು ಹಾಗೂ ಹೊರ ಹೋಗುವವರಿಗೆ ನೆಗೆಟಿವ್ ವರದಿಯನ್ನೂ ಕಡ್ಡಾಯಗೊಳಿಸಬೇಕು.

ಅಂತರಾಷ್ಟ್ರೀಯ ಪ್ರಯಾಣದ ಹಿಸ್ಟರಿ ಇಲ್ಲದವರಿಗೂ ಓಮಿಕ್ರಾನ್ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಇದು ಸಕಾಲವಾಗಿದೆ. ನಿರ್ಬಂಧಗಳ ಹೇರುವ ಆಗತ್ಯವಿಲ್ಲ ಆದರೆ, ರಾಜ್ಯದ ಗಡಿ ಪ್ರವೇಶಿಸುವವರಿಗೆ ಪರೀಕ್ಷಾ ವರದಿ ಹಾಗೂ ಲಸಿಕೆ ಪ್ರಮಾಣಪತ್ರ ಕಡ್ಡಾಯಗೊಳಿಸುವುದು ಪ್ರಮುಖವಾಗಿದೆ ಎಂದು ತಜ್ಞರ ಸಮಿತಿ ಸದಸ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT