ಗೌರವ್ ಗುಪ್ತಾ 
ರಾಜ್ಯ

ವಿದೇಶದಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್'ಗೊಳಪಡಿಸುವುದು ಅಗತ್ಯವಿದೆ: ಗೌರವ್ ಗುಪ್ತಾ

ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಬೆಂಗಳೂರು: ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಬಂದವರ ಸಾಂಸ್ಥಿಕ ಕ್ವಾರಂಟೈನ್ ಗೊಳಪಡಿಸುವುದು ಅಗತ್ಯವಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗಿದ್ದು, ಈ ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯ ಸದ್ಯ 300 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಸಾವಿರ ಹಾಸಿಗೆಗಳನ್ನು ಕೋವಿಡ್ ಹಾಗೂ ಓಮಿಕ್ರಾನ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚು ಜನರು ದಾಖಲಾದರೆ ಇನ್ನಷ್ಟು ಹಾಸಿಗೆಗಳನ್ನು ಮೀಸಲಿಡುತ್ತೇನೆಂದು ತಿಳಿಸಿದರು.

ಓಮಿಕ್ರಾನ್ ಬಹಳ ವೇಗವಾಗಿ ಹರಡುತ್ತಿದೆ ಎಂಬ ವಿಚಾರ ತಿಳಿದ್ದು ಮುಂದಿನ ದಿನಗಳಲ್ಲಿ ಬಹುತೇಕ ಪ್ರಕರಣ ಡೆಲ್ಟಾ ಬದಲು ಓಮಿಕ್ರಾನ್ ಬರಬಹುದು ಎಂದು ಯುಕೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಸೋಂಕಿತರ ಪತ್ತೆಯಾದರ ಅವರ ಚಿಕಿತ್ಸೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸಿದ್ಧತೆ ಮುಂದುವರೆಸುತ್ತೇವೆ. ಹೊರ ದೇಶದಿಂದ ಬರುವ ಎಲ್ಲರನ್ನೂ, ಅದರಲ್ಲಿಯೂ ಹೈರಿಸ್ಕ್ ಇರುವ ದೇಶಗಳಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆಗೊಳಪಡಿಸುತ್ತೇವೆ. ನಗರದಲ್ಲಿ ಸದ್ಯ ಕೋವಿಡ್ ಪ್ರಕರಣದಲ್ಲಿ ಏರಿಕೆಯಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಏರಿಕೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಸೋಂಕಿನ ಲಕ್ಷಣ ಕಂಡು ಬರುವ ಪ್ರತಿಯೊಬ್ಬರು ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು. ಈ ನಿಟ್ಟನಲ್ಲಿ ಬಿಬಿಎಂಪಿ ಪರೀಕ್ಷೆ ಸಂಖ್ಯೆ ಹೆಚ್ಚಿಸಿದೆ. ಜೊತೆಗೆ ಲಸಿಕೆ ನೀಡುವುದನ್ನು ಕೂಡ ಜಾಸ್ತಿ ಮಾಡಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT