ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಎಂಇಎಸ್ ಪುಂಡರಿಂದ ಪೊಲೀಸ್ ವಾಹನಗಳಿಗೆ ಬೆಂಕಿ ಅಕ್ಷಮ್ಯ, ದುರುಳರಿಗೆ ಕನ್ನಡಿಗರ ಶಕ್ತಿ ತೋರಿಸಬೇಕು: ಎಚ್ ಡಿಕೆ

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರು, ಕರ್ನಾಟಕದ ಮೇಲಿನ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು, ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂದನ್ನು ತೋರಿಸಬೇಕು ಎಂದಿದ್ದಾರೆ.

ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ, ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT