ಬೆಳಗಾವಿಯಲ್ಲಿ ಧರಣಿ ನಡೆಸುತ್ತಿರುವ ಯುವಕರು 
ರಾಜ್ಯ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ: 27 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಬೆಳಗಾವಿಯಲ್ಲಿ ಸೆಕ್ಷನ್ 144 ಜಾರಿ

ಬೆಳಗಾವಿಯಲ್ಲಿ ಕಳೆದ ರಾತ್ರಿ ನಡೆದ ಎಂಇಎಸ್ ಪುಂಡರ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳಿಗೆ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬೆಳಗಾವಿ: ಬೆಳಗಾವಿಯಲ್ಲಿ ಕಳೆದ ರಾತ್ರಿ ನಡೆದ ಎಂಇಎಸ್ ಪುಂಡರ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳಿಗೆ ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಎಂಇಎಸ್ ಮುಖಂಡ ಶುಭಂ ಶಳಕೆ. ಶ್ರೀರಾಮ ಸೇನಾ ಹಿಂದುಸ್ತಾನ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ ಸೇರಿದಂತೆ 27 ಆರೋಪಿಗಳನ್ನ ಇಲ್ಲಿನ 2ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂದನಕ್ಕೆ ಆದೇಶಿಸಿದ. ಬಂಧಿತ ಆರೋಪಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಕಳಿಸಲಾಗಿದೆ.

ಎಂಇಎಸ್ ಮತ್ತು ಶಿವಸೇನೆಯ ಕೆಲವು ಸದಸ್ಯರಿಂದ ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. 400 ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಮಧ್ಯರಾತ್ರಿ ಕಲ್ಲು ತೂರಾಟ ನಡೆಸಿರುವ ಪುಂಡರು ಸರ್ಕಾರಿ ವಾಹನಗಳೂ ಸೇರಿದಂತೆ ಸರ್ವಜನಿಕ ವಾಹನಗಳ ಮೇಲೂ ಅಟ್ಟಹಾಸ ಮೆರೆದಿದ್ದಾರೆ. ಇದರಿಂದಾಗಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಬೆಳಗಾವಿ ಭಾಗದಲ್ಲಿ ಇಷ್ಟೆಲ್ಲ ಅನಾಹುತಗಳು ನಡೆಯುತ್ತಿದ್ದರೂ ಇಲ್ಲಿನ ಶಾಸಕರು ಮತ್ತು ಸ್ಥಳೀಯ ಮುಖಂಡರು ಏನು ತಿಳಿಯದಂತೆ ಸುಮ್ಮನೆ ಕುಳಿತಿರುವುದು ಏಕೆ ಎಂದು ಕರ್ನಾಟಕ‌ ರಕ್ಷಣ ವೇದಿಕೆ ಮುಖಂಡರು ಪ್ರಶ್ನಿಸಿದ್ದಾರೆ. ಗಲಬೆಗೆ ಕಾರಣರಾದವರ ವಿರುದ್ದ ಗೂಂಡಾ ಕಾಯ್ದೆ ಹಾಕಿ ಬಂದಿಸಬೇಕು ಎಂದಿದ್ದಾರೆ.

ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಪೊಲೀಸರು: ಎಂಇಎಸ್ ಪುಂಡರ ಅಟ್ಟಹಾಸ ಮಿತಿಮೀರಿದ ಹಿನ್ನೆಲೆಯಲ್ಲಿ ನಗರದ ಮೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾನೂನು ಸುವ್ಯವಸ್ಥೆ ಹಾಳು ಮಾಡುವುದು, ಭಾಷಾ ವೈಷಮ್ಯ ಮೂಡಿಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ನೂರಾರು ಎಂಇಎಸ್ ಪುಂಡರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT