ಸ್ಯಾಂಕಿ ಕೆರೆಯ ಹತ್ತಿರವಿರುವ ಶಿವಾಜಿ ಪ್ರತಿಮೆ 
ರಾಜ್ಯ

ಸದಾಶಿವನಗರ ಸ್ಯಾಂಕಿ ಕೆರೆ ಬಳಿಯಿರುವ ಶಿವಾಜಿ ಪುತ್ಥಳಿಗೆ ಮಸಿ ಬಳಿದ ಪ್ರಕರಣ: ಏಳು ಮಂದಿ ಬಂಧನ

ರಾಜಧಾನಿ ಬೆಂಗಳೂರಿನ ಸದಾಶಿವನಗರ ಬಳಿ ಶಿವಾಜಿ ಪುತ್ಥಳಿಗೆ ಕಪ್ಪು ಬಣ್ಣ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರ ಬಳಿ ಶಿವಾಜಿ ಪುತ್ಥಳಿಗೆ ಕಪ್ಪು ಬಣ್ಣ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಮೊನ್ನೆ ಡಿಸೆಂಬರ್ 17ರಂದು ಸದಾಶಿವನಗರದ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿಯಲಾಗಿತ್ತು. ಇದಾದ ಬಳಿಕ ಮರಾಠ ಅಸೋಸಿಯೇಷನ್ ನವರು ನೀಡಿದ್ದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಸ್ಥಳದಲ್ಲಿ ಸಿಕ್ಕಿದ ಕುರುಹುಗಳು ಮತ್ತು ತನಿಖೆಯ ಬಳಿಕ ನಿನ್ನೆ ಸಾಯಂಕಾಲ 5 ಮಂದಿಯನ್ನು ಹಾಗೂ ಇಂದು ಬೆಳಗ್ಗೆ ಇಬ್ಬರನ್ನು ಬಂಧಿಸಿದ್ದೇವೆ. ಒಟ್ಟಾರೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ್ದೇವೆ. ಅವರ ಬಳಿಯಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಕೆಲವರನ್ನು ಬಂಧಿಸಬೇಕಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT