ಕನ್ನಡ ವಿಶ್ವವಿದ್ಯಾಲಯ 
ರಾಜ್ಯ

ಕನ್ನಡ ವಿಶ್ವವಿದ್ಯಾಲಯ ರಕ್ಷಿಸಿ: ಬರಗೂರು

ಕನ್ನಡ ವಿಶ್ವವಿದ್ಯಾಲಯದ ವಿವಾದಿತ ಸಮಸ್ಯೆಗಳನ್ನು ಪರಿಹರಿಸಿ, ವಿವಿಯನ್ನು ಕೂಡಲೇ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಬಂಡಾಯ ಸಾಹಿತ್ಯ ಸಂಘಟನೆ-ಕರ್ನಾಟಕದ ವತಿಯಿಂದ ಬರಹಗಾರ ಬರಗೂರು ರಾಮಚಂದ್ರಪ್ಪ ಅವರು ಮುಖ್ಯಮಂತ್ರಿಗೆ ಹಾಗೂ ಉನ್ನತ ಶಿಕ್ಷಣ ಶಿಕ್ಷಣ ಸಚಿವರಿಗೆ ಶನಿವಾರ ಪತ್ರ ಬರೆದಿದ್ದಾರೆ.

ಬೆಂಗಳೂರು: ಕನ್ನಡ ವಿಶ್ವವಿದ್ಯಾಲಯದ ವಿವಾದಿತ ಸಮಸ್ಯೆಗಳನ್ನು ಪರಿಹರಿಸಿ, ವಿವಿಯನ್ನು ಕೂಡಲೇ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಬಂಡಾಯ ಸಾಹಿತ್ಯ ಸಂಘಟನೆ-ಕರ್ನಾಟಕದ ವತಿಯಿಂದ ಬರಹಗಾರ ಬರಗೂರು ರಾಮಚಂದ್ರಪ್ಪ ಅವರು ಮುಖ್ಯಮಂತ್ರಿಗೆ ಹಾಗೂ ಉನ್ನತ ಶಿಕ್ಷಣ ಶಿಕ್ಷಣ ಸಚಿವರಿಗೆ ಶನಿವಾರ ಪತ್ರ ಬರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ವಿವಾದಗಳಿಂದ ಹೆಚ್ಚು ಸುದ್ದಿಯಾಗುತ್ತಿದೆ. ಇದು ಕನ್ನಡ ಸಾಂಸ್ಕøತಿಕ ಲೋಕವು ತಲೆ ತಗ್ಗಿಸುವಂತೆ ಮಾಡುತ್ತಿದೆ. ವೈಯಕ್ತಿಕ ಮತ್ತು ಸಾಂಸ್ಥಿಕ ವಿವಾದಗಳು ಒಂದು ಕಡೆಯಾದರೆ, ಕನ್ನಡ ವಿವಿಗೆ ಅನುದಾನದ ಕೊರತೆಯುಂಟಾಗಿ ಬೋಧಕರು, ಬೋಧಕೇತರರು, ಸಂಶೋಧನಾ ವಿದ್ಯಾರ್ಥಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬೇರೆ ಸಾಮಾನ್ಯ ವಿವಿಗಳಿಗೆ ವಿದ್ಯಾರ್ಥಿಗಳ ಪ್ರವೇಶ ಶುಲ್ಕದಿಂದ ಸಾಕಷ್ಟು ಆರ್ಥಿಕ ಬಲ ಬರುತ್ತದೆ. ಆದರೆ ಕನ್ನಡ ವಿವಿಯು ಪ್ರಧಾನವಾಗಿ ಸಂಶೋಧನಾ ವಿವಿಯಾದ್ದರಿಂದ ಸರಕಾರ ನೀಡುವ ಅನುದಾನವನ್ನೇ ಅವಲಂಬಿಸಬೇಕಾಗುತ್ತದೆ. ಈ ಅನುದಾನವು ಪೂರ್ಣ ಪ್ರಮಾಣದಲ್ಲಿ ವಿಶ್ವವಿದ್ಯಾಲಯಕ್ಕೆ ಲಭ್ಯವಾಗಲಿಲ್ಲವೆಂದರೆ ಹೇಗೆ ಎಂದು ಬರಗೂರು ರಾಮಚಂದ್ರಪ್ಪ ಪ್ರಶ್ನಿಸಿದ್ದಾರೆ.

ಅನುದಾನ ಬಾರದ ಹಿನ್ನೆಲೆಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ 36 ತಿಂಗಳಿನಿಂದ ಶಿಷ್ಯವೇತನ ನೀಡಿಲಾಗಿಲ್ಲ. ಜತೆಗೆ ಬೋಧಕ ಮತ್ತು ಬೋಧಕೇತರರಿಗೂ ಕೆಲವು ತಿಂಗಳ ವೇತನ ನೀಡಿಲ್ಲವೆಂದು ಹೇಳಲಾಗಿದೆ. ಕನ್ನಡದ ಮೂಲಕ ಸ್ಥಳೀಯ ಹಾಗೂ ಜಾಗತಿಕ ಜ್ಞಾನವನ್ನು ನೀಡುವ ಮಹದುದ್ದೇಶದಿಂದ ಆರಂಭವಾದ ಕನ್ನಡ ವಿವಿಗೆ ಇಂಥ ಆರ್ಥಿಕ ದುಃಸ್ಥಿತಿ ಬರಬಾರದು. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಅಗತ್ಯವಾದ ಪೂರ್ಣ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ವಿನಂತಿಸುತ್ತೇನೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಸರಕಾರದ ಕನ್ನಡಪರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ ಮತ್ತು ಪ್ರಶ್ನಾರ್ಹವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪೂರ್ಣ ಅನುದಾನ ಬಿಡುಗಡೆ ಮಾಡುವುದರ ಜತೆಗೆ ನಿತ್ಯ ವಿವಾದದಿಂದ ಕೆಟ್ಟ ಹೆಸರಿಗೆ ಕಾರಣವಾಗುತ್ತಿರುವ ಕನ್ನಡ ವಿವಿಯ ಘನತೆಯನ್ನು ಕಾಪಾಡುವ ಸಲುವಾಗಿ ಒಂದು ಸೂಕ್ತ ಸಮಿತಿಯನ್ನು ನೇಮಿಸಿ ವಿವಾದಿತ ವಿದ್ಯಮಾನಗಳನ್ನು ಪರಿಶೀಲಿಸಿ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಬೇಕೆಂದು ಬರಗೂರು ರಾಮಚಂದ್ರಪ್ಪ ವಿನಂತಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT