ಪ್ರವೀಣ್ ಶೆಟ್ಟಿ 
ರಾಜ್ಯ

ಬೆಳಗಾವಿಯತ್ತ ಕನ್ನಡಪರ ಸಂಘಟನೆಗಳು: ಹಿರೇಬಾಗೇವಾಡಿಯಲ್ಲಿ ಪ್ರವೀಣ್ ಶೆಟ್ಟಿ ಪೊಲೀಸರ ವಶಕ್ಕೆ

ಬೆಂಗಳೂರು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಬೆಳಗಾವಿಯತ್ತ ಆಗಮಿಸುತ್ತಿದ್ದಾರೆ. ಕರ್ನಾಟಕದ ಗಡಿಯೊಳಗೆ ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್

ಹಿರೇಬಾಗೇವಾಡಿ/ಬೆಳಗಾವಿ: ಬೆಂಗಳೂರು ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಕನ್ನಡ ಪರ ಸಂಘಟನೆಗಳ ಸದಸ್ಯರು ಬೆಳಗಾವಿಯತ್ತ ಆಗಮಿಸುತ್ತಿದ್ದಾರೆ. ಕರ್ನಾಟಕದ ಗಡಿಯೊಳಗೆ ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.

ಈ ಮಧ್ಯೆ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಗಮಿಸುತ್ತಿದ್ದ ಪ್ರವೀಣ್ ಶೆಟ್ಟಿ ಹಾಗೂ ಅವರ ಬಣದ ಕರವೇ ಸಂಘಟನೆಯ ಕಾರ್ಯಕರ್ತರನ್ನು ತಡೆಯಲಾಗಿದೆ. ಸುವರ್ಣ ವಿಧಾನಸೌಧದಿಂದ 10 ಕಿಲೋ ಮೀಟರ್ ದೂರದಲ್ಲಿರುವ ಹಿರೇಬಾಗೇವಾಡಿ ಟೋಲ್ ಬಳಿ ಕಾರ್ಯಕರ್ತರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಪ್ರವೀಣ್ ಶೆಟ್ಟಿ, ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಎಂಇಎಸ್ ಮುಖಂಡರಿಗೆ ಮಸಿ ಬಳಿದ ಕನ್ನಡಿಗರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಶಾಸಕರು ಮಾತನಾಡಬೇಕು. ಇಲ್ಲದಿದ್ದರೆ ಅಂತಹ ಶಾಸಕರ ವಿರುದ್ಧ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಬೇಕಾಗುತ್ತದೆ ಎಂದು ಎಚ್ಚರಿಗೆ ಕೊಟ್ಟರು

ನಾವು ಸರ್ಕಾರ, ಕನ್ನಡಿಗರ ಪರವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮನ್ನು ಏಕೆ ವಶಕ್ಕೆ ಪಡೆಯುತ್ತಿದ್ದೀರಿ ಎಂದು ಪ್ರವೀಣ್ ಶೆಟ್ಟಿ ಅವರು ಪೊಲೀಸರನ್ನು ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರ ಎಂಇಎಸ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳದಿದ್ದರೆ ನಾಳೆ ಬೆಂಗಳೂರಿನಲ್ಲಿ ನಡೆಯುವ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ. ಕರ್ನಾಟಕ ಬಂದ್ ಘೋಷಣೆ ಮಾಡುವ ಬಗ್ಗೆ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.

ಹಿರೇಬಾಗೇವಾಡಿಯಲ್ಲಿ ಪ್ರವೀಣ್ ಶೆಟ್ಟಿ ಹಾಗೂ ಕನ್ನಡ ಪರ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಸಾರಿಗೆ ಬಸ್ ನಲ್ಲಿ ಕರೆದುಕೊಂಡು ಹೋದರು. ಈ ವೇಳೆ, ಎಂಎಎಸ್ ಪುಂಡರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT