ಸಾಂದರ್ಭಿಕ ಚಿತ್ರ 
ರಾಜ್ಯ

2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್‌ಡೌನ್‌ ನಿಂದ ಗಣಿ ಉದ್ಯಮವು...

ಬಳ್ಳಾರಿ: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್‌ಡೌನ್‌ ನಿಂದ ಗಣಿ ಉದ್ಯಮವು ನಿಧಾನಗತಿಯಲ್ಲಿದ್ದಾಗಲೂ ಅಪಘಾತದಲ್ಲಿ 110 ಸಾವುಗಳು ವರದಿಯಾಗಿವೆ.

ಈ ಜಿಲ್ಲೆಗಳಲ್ಲಿ ಸುಮಾರು 5,000 ಟ್ರಕ್‌ಗಳು ಗಣಿಗಾರಿಕೆ ಉತ್ಪನ್ನಗಳನ್ನು ಸಾಗಿಸುತ್ತವೆ. ಭಾರೀ ವಾಹನಗಳ ಸಂಚಾರದಿಂದ ರಸ್ತೆಯ ಸ್ಥಿತಿಯೂ ಹಾಳಾಗಿದ್ದು, ಮತ್ತಷ್ಟು ಅಪಘಾತಗಳಿಗೆ ಕಾರವಾಗಿದೆ. ಅಂಕಿಅಂಶಗಳ ಪ್ರಕಾರ, ಈ ವರ್ಷ ಸಾವನ್ನಪ್ಪಿದ 180 ಜನರಲ್ಲಿ 110 ಜನರು ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳಾಗಿದ್ದಾರೆ.

ಬಳ್ಳಾರಿಯ ಸಾಮಾಜಿಕ ಕಾರ್ಯಕರ್ತ ಭರತ್ ರೆಡ್ಡಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 1,650 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. "ಬಳ್ಳಾರಿ ಜಿಲ್ಲೆಯಲ್ಲಿ ಪ್ರಮುಖ ಗಣಿಗಾರಿಕೆ ಘಟಕಗಳು ಇರುವುದರಿಂದ ಗಣಿಗಾರಿಕೆ ಟ್ರಕ್‌ಗಳ ಸಂಚಾರ ಹೆಚ್ಚಾಗಿದೆ. ಕಳೆದ ವರ್ಷ ಸಾಂಕ್ರಾಮಿಕ ಲಾಕ್‌ಡೌನ್‌ನಿಂದಾಗಿ ವಾಹನಗಳ ಸಂಖ್ಯೆ ಕಡಿಮೆಯಾಗಿತ್ತು" ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ ಮತ್ತು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಹಾಗೂ ಸಂಡೂರಿನಿಂದ ಬಳ್ಳಾರಿ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಹೊಸಪೇಟೆ ಹಾಗೂ ಬಳ್ಳಾರಿ ಎನ್‌ಎಚ್ 67 ಕಾಮಗಾರಿ ಅಪೂರ್ಣವಾಗಿದ್ದು, ಇದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ನಿವಾಸಿಗಳು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಗಣಿಗಾರಿಕೆ ಟ್ರಕ್‌ಗಳ ದುಡುಕಿನ ಚಾಲನೆಯಿಂದಾಗಿ ಅನೇಕ ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT