ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಎಸ್ ಆರ್ ಪಾಟೀಲ್ 
ರಾಜ್ಯ

ನೀವು ಭಿಕ್ಷೆ ಬೇಡಿ, ಸಾಲ ಕೇಳಿ ಅಥವಾ ಕದಿಯಿರಿ, ಆದ್ರೆ ಕೃಷ್ಣಾ ಮೇಲ್ದಂಡೆ ಕಾಮಗಾರಿ ಮಾತ್ರ ಪೂರ್ಣ ಮಾಡಿ: ಸರ್ಕಾರಕ್ಕೆ ಎಸ್ ಆರ್ ಪಾಟೀಲ್ ಆಗ್ರಹ

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು 60 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಬಜೆಟ್ ನ ಅಗತ್ಯವಿದ್ದು ರಾಜ್ಯಸರ್ಕಾರ ಜಿಡಿಪಿಯ ಶೇಕಡಾ 10ರಷ್ಟನ್ನು ಎರಡು ವರ್ಷಗಳ ಕಾಲ ಮೀಸಲಿಡಬೇಕೆಂದು ನಿನ್ನೆ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು 60 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಬಜೆಟ್ ನ ಅಗತ್ಯವಿದ್ದು ರಾಜ್ಯಸರ್ಕಾರ ಜಿಡಿಪಿಯ ಶೇಕಡಾ 10ರಷ್ಟನ್ನು ಎರಡು ವರ್ಷಗಳ ಕಾಲ ಮೀಸಲಿಡಬೇಕೆಂದು ನಿನ್ನೆ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸುಮಾರು 1.33 ಲಕ್ಷ ಎಕರೆ ಜಮೀನಿನ ಅವಶ್ಯಕತೆಯಿದ್ದು ಮುಳುಗಡೆಯಾಗಲಿರುವ 20 ಗ್ರಾಮಗಳ ಜನರನ್ನು ಬೇರೆ ಕಡೆಗೆ ವರ್ಗಾಯಿಸಿ ಅವರಿಗೆ ಜೀವನಕ್ಕೆ ವ್ಯವಸ್ಥೆ ಮಾಡಬೇಕು. ನೀವು ಭಿಕ್ಷೆಯಾದರೂ ಬೇಡಿ, ಸಾಲವಾದರೂ ತೆಗೆದುಕೊಳ್ಳಿ ಒಟ್ಟಿನಲ್ಲಿ ಯೋಜನೆ ಪೂರ್ಣವಾಗಬೇಕು ಅಷ್ಟೆ ಎಂದರು.

ಆಗ ಸದನದ ಸದಸ್ಯರು ಸರ್ಕಾರ ನದಿ, ರಸ್ತೆ, ಮೂಲಭೂತ ಸೌಕರ್ಯ, ಕೈಗಾರಿಕಾ ಯೋಜನೆಗಳನ್ನು ಆದ್ಯತೆಯಾಗಿ ಕೈಗೆತ್ತಿಕೊಂಡು ಉತ್ತರ ಕರ್ನಾಟಕದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿಕೊಡಬೇಕು. ಉತ್ತರ ಕರ್ನಾಟಕ ಭಾಗದ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿನ್ನೆ ಸದನದಲ್ಲಿ ಚರ್ಚೆ ನಡೆಸಲಾಗಿತ್ತು.

ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಂಡ ನಂತರ 130 ಟಿಎಂಸಿಯಷ್ಟು ನೀರನ್ನು ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹಿಸಿಟ್ಟುಕೊಳ್ಳಬಹುದು, ಇದರಿಂದ ಬಾಗಲಕೋಟೆ, ವಿಜಯಪುರ, ಗದಗ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ 15 ಲಕ್ಷ ಎಕರೆ ಕೃಷಿ ಭೂಮಿಗೆ ನೀರುಣಿಸಲು ಸಹಾಯವಾಗುತ್ತದೆ. ಜಲಾಶಯದಲ್ಲಿ 173 ಟಿಎಂಸಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂದು ಎಸ್ ಆರ್ ಪಾಟೀಲ್ ವಿವರಿಸಿದರು.

ಭೂ ಸ್ವಾದೀನ ಪ್ರಕ್ರಿಯೆ ಮುಗಿದ ನಂತರ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು 524.25 ಮೀಟರ್ ಗೆ ಹೆಚ್ಚಿಸಿದ ನಂತರ ಒಟ್ಟು ನೀರಿನ ಸಂಗ್ರಹ 304 ಟಿಎಂಸಿಗೆ ಹೆಚ್ಚಳವಾಗುತ್ತದೆ. ಇದರಿಂದ ಒಟ್ಟಾರೆಯಾಗಿ 30 ಲಕ್ಷ ಎಕರೆ ಕೃಷಿ ಭೂಮಿಗೆ ನೀರುಣಿಸಬಹುದು ಎಂದು ಹೇಳಿದರು.

ಮಹಾದಾಯಿ ಯೋಜನೆಯನ್ನು ಸರ್ಕಾರ ಶೀಘ್ರವೇ ಕೈಗೆತ್ತಿಕೊಳ್ಳಬೇಕೆಂದು ಸಹ ಎಸ್ ಆರ್ ಪಾಟೀಲ್ ಒತ್ತಾಯಿಸಿದರು. ಇದಕ್ಕೆ ಜೆಡಿಎಸ್ ನಾಯಕ ಕೆ ಟಿ ಶ್ರೀಕಾಂತೇ ಗೌಡ, 1978 ರಲ್ಲಿ ಎಸ್‌ಆರ್ ಬೊಮ್ಮಾಯಿ ಆಯೋಗವು ಯೋಜನೆಯನ್ನು ರೂಪಿಸಿತ್ತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT