ಸಂಗ್ರಹ ಚಿತ್ರ 
ರಾಜ್ಯ

ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ 9ನೇ ರಾಜ್ಯ ಕರ್ನಾಟಕ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

ಬೆಳಗಾವಿ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆ ಮತಾಂತರ ನಿಷೇಧ ಮಸೂದೆ ಅಂಗೀಕರಿಸಿದ್ದು, ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ.

ಭಾರೀ ಕೋಲಾಹಲದ ನಡುವೆಯೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021 ಎಂಬ ಮತಾಂತರ ನಿಷೇಧ ಮಸೂದೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಮತದ ಮೂಲಕ ಗುರುವಾರ ಅಂಗೀಕರಿಸಲಾಯಿತು. ಆ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದ ದೇಶದ 9ನೇ ರಾಜ್ಯವಾಗಿದೆ. ಈ ಹಿಂದೆ ಅರುಣಾಚಲ ಪ್ರದೇಶ, ಗುಜರಾತ್, ಒಡಿಶಾ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಉತ್ತರಾಖಂಡ ರಾಜ್ಯಗಳು ಈ ಮಸೂದೆಯನ್ನು ಅಂಗೀಕರಿಸಿದ್ದವು.

ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಧಾವಿಸಿ ಪ್ರತಿಭಟನೆ ನಡೆಸಿದ ನಂತರವೂ ವಿಧಾನಸಭೆ ಮಸೂದೆಯನ್ನು ಅಂಗೀಕರಿಸಿದ್ದು ದಿನದ ಪ್ರಮುಖ ಬೆಳವಣಿಗೆಯಾಗಿದೆ.  ಮಸೂದೆಯ ಮೇಲಿನ ಮ್ಯಾರಥಾನ್ ಚರ್ಚೆಯ ಸಂದರ್ಭದಲ್ಲಿ, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಹಲವಾರು ಪ್ರಮುಖ ನಾಯಕರು ತೀವ್ರ ವಾಗ್ವಾದ ನಡೆಸಿದರು. ಈ ಮಸೂದೆಯ ಕರಡನ್ನು ರೂಪಿಸಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ವಾದಿಸಿದರೆ, ಅದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಲೋಚನೆಯಾಗಿತ್ತು ಎಂದು ಕಾಂಗ್ರೆಸ್ ಪ್ರತಿದಾಳಿ ನಡೆಸಿತು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಸೂದೆ ಅಸಂವಿಧಾನಿಕ ಮತ್ತು ಕ್ರೂರ ಎಂದು ಚರ್ಚೆ ಆರಂಭಿಸಿದಾಗ, ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಮಧ್ಯಪ್ರವೇಶಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಮೊದಲ ಬಾರಿಗೆ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಮುಂದಾಗಿತ್ತು ಎಂದು ಹೇಳಿದರು. 

'ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಾನೂನು ಆಯೋಗವು ಇದೇ ರೀತಿಯ ವಿಧೇಯಕವನ್ನು ರಚಿಸಿತ್ತು ಮತ್ತು ಸ್ಕ್ರೀನಿಂಗ್ ಕಮಿಟಿಯ ಮುಂದೆ ವಿಧೇಯಕವನ್ನೂ ತಂದಿತ್ತು. ಅದೇ ವಿಧೇಯಕಕ್ಕೆ ಕೆಲವು ಬದಲಾವಣೆಗಳನ್ನು ಮಾಡಿ ಈಗ ವಿಧಾನಸಭೆಯಲ್ಲಿ ಮಂಡಿಸಿದ್ದೇವೆ' ಎಂದು  ಹೇಳಿದರು. '

ಕಾನೂನು ಸಚಿವರ ಹೇಳಿಕೆಗೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು (ಸಭಾಪತಿ) ಸಿದ್ದರಾಮಯ್ಯ ಮತ್ತು ಕಾನೂನು ಸಚಿವರೊಂದಿಗೆ ಸಂಕ್ಷಿಪ್ತ ಸಭೆ ನಡೆಸಿ, ಸ್ಕ್ರೀನಿಂಗ್ ಕಮಿಟಿಯ ಮುಂದೆ ಅಂತಹ ಮಸೂದೆಯನ್ನು ತಂದಿದೆಯೇ ಎಂದು ಸ್ಪಷ್ಟಪಡಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕೇಳಿದರು. ಸಭೆಯಲ್ಲಿ, ಸ್ಕ್ರೀನಿಂಗ್ ಕಮಿಟಿ ರೂಪಿಸಿದ ಮಸೂದೆಗೆ ಸಿದ್ದರಾಮಯ್ಯ ಸಹಿ ಹಾಕಿದ್ದು, 2016ರಲ್ಲಿ ಸಂಪುಟದ ಮುಂದೆ ಇಡುವಂತೆ ಹೇಳಿದ್ದರು ಎಂದು ತಿಳಿದು ಬಂದಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT