ಸಾಂದರ್ಭಿಕ ಚಿತ್ರ 
ರಾಜ್ಯ

ಕೌಟುಂಬಿಕ ಕಲಹ: ರಾಮನಗರದಲ್ಲಿ ಕೆರೆಗೆ ಹಾರಿ ಮೂವರ ಆತ್ಮಹತ್ಯೆ, ಬದುಕುಳಿದ ಬಾಲಕಿ

ಕೌಟುಂಬಿಕ ‌ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ‌ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ

ರಾಮನಗರ: ಕೌಟುಂಬಿಕ ‌ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ‌ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಗ್ರಾಮದ ಸಿದ್ದಮ್ಮ(55), ಆಕೆಯ ಮಗಳು ಸುಮಿತ್ರಾ (30) ಮತ್ತು ಅಳಿಯ‌ ಹನುಮಂತ ರಾಜು(35) ಮೃತರು. ಬಾಲಕಿ ಕೀರ್ತನಾ (11) ಸ್ಥಿತಿ ಕೂಡ ಗಂಭೀರವಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ ಅವರಲ್ಲಿ ಮೃತ ಸುಮಿತ್ರಾಳ 10 ವರ್ಷದ ಮಗಳು ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ಆತ್ಮಹತ್ಯೆ ವಿಷಯ ತಿಳಿಸಿದ್ದಾಳೆ.

ಕೂಡಲೇ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ. ಉಳಿದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT