ನಮ್ಮ ಮೆಟ್ರೋ 
ರಾಜ್ಯ

ನಮ್ಮ ಮೆಟ್ರೋ ಹಂತ-2A: 577 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅಸ್ತು

ತಾಂತ್ರಿಕ ತಜ್ಞರ ಸಮಿತಿ(ಟಿಇಸಿ)ಯ ಶಿಫಾರಸಿನಂತೆ ನಮ್ಮ ಮೆಟ್ರೋ ಯೋಜನೆಯ 2ಎ ಹಂತದ ವಿವಿಧ ಸ್ಥಳಗಳಲ್ಲಿ 833 ಮರಗಳ ಪೈಕಿ 577 ಮರಗಳನ್ನು ಕಡಿಯಲು, 212 ಮರಗಳನ್ನು ಸ್ಥಳಾಂತರಿಸಲು...

ಬೆಂಗಳೂರು: ತಾಂತ್ರಿಕ ತಜ್ಞರ ಸಮಿತಿ(ಟಿಇಸಿ)ಯ ಶಿಫಾರಸಿನಂತೆ ನಮ್ಮ ಮೆಟ್ರೋ ಯೋಜನೆಯ 2ಎ ಹಂತದ ವಿವಿಧ ಸ್ಥಳಗಳಲ್ಲಿ 833 ಮರಗಳ ಪೈಕಿ 577 ಮರಗಳನ್ನು ಕಡಿಯಲು, 212 ಮರಗಳನ್ನು ಸ್ಥಳಾಂತರಿಸಲು ಮತ್ತು 44 ಮರಗಳನ್ನು ಉಳಿಸಿಕೊಳ್ಳಲು ಕರ್ನಾಟಕ ಹೈಕೋರ್ಟ್ ಗುರುವಾರ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ(ಬಿಎಂಆರ್‌ಸಿಎಲ್) ಗುರುವಾರ ಅನುಮತಿ ನೀಡಿದೆ.

ತಜ್ಞರ ಸಮಿತಿ ಶಿಫಾರಸಿನಂತೆ 577 ಮರಗಳನ್ನು ಕಡಿಯಲು ಅನುಮತಿಸಬಹುದೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ತಜ್ಞರಲ್ಲ ಎಂದು ಹೈಕೋರ್ಟ್ ಹೇಳಿದೆ.

ಟಿಇಸಿ ವರದಿ ಆಧರಿಸಿ ಮರಗಳನ್ನು ಕಡಿಯಲು ಅನುಮತಿ ಕೋರಿ ಬಿಎಂಆರ್‌ಸಿಎಲ್‌ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ತಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗಂವ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಟಿಇಸಿ ಸೂಚಿಸಿದಂತೆ 44 ಮರಗಳನ್ನು ಉಳಿಸಿಕೊಳ್ಳುವ ಮತ್ತು 212 ಮರಗಳನ್ನು ಸ್ಥಳಾಂತರಿಸುವ ಮೂಲಕ 256 ಮರಗಳನ್ನು ಉಳಿಸಬಹುದು ಎಂಬುದನ್ನು ನ್ಯಾಯಾಲಯವು ಗಮನಿಸಿದೆ.

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸದಿರುವ ಕುರಿತು 2018ರಲ್ಲಿ ದತ್ತಾತ್ರೇಯ ಟಿ ದೇವರೆ ಮತ್ತು ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT