ತೊಟ್ಟಿಯಂಡ ಸೋಮಣ್ಣ 
ರಾಜ್ಯ

ಮಡಿಕೇರಿಯಲ್ಲಿ ದಾರುಣ ಘಟನೆ: ಆಟದ ಮೈದಾನದಲ್ಲೇ ಕುಸಿದು ಬಿದ್ದು ಯುವ ಹಾಕಿ ಆಟಗಾರ ಸಾವು

ಮೂರ್ನಾಡು ಎಂಬಲ್ಲಿ ಚೌರಿರ ಹಾಕಿ ಪಂದ್ಯಾವಳಿಗೆ ಇಂದು ಚಾಲನೆ ನೀಡಲಾಗಿತ್ತು. ಒಟ್ಟು 90 ಕೊಡವ ಕುಟುಂಬಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.

ಮಡಿಕೇರಿ: ಯುವ ಹಾಕಿ ಆಟಗಾರನೊಬ್ಬ ಆಟವಾಡುತ್ತಲೇ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ಜರುಗಿದೆ. ಮೃತ ಆಟಗಾರನ ಹೆಸರು ತೊಟ್ಟಿಯಂಡ ಸೋಮಣ್ಣ ಎಂದು ತಿಳಿದುಬಂದಿದೆ.

ಮೂರ್ನಾಡು ಎಂಬಲ್ಲಿ ಚೌರಿರ ಹಾಕಿ ಪಂದ್ಯಾವಳಿಗೆ ಇಂದು ಚಾಲನೆ ನೀಡಲಾಗಿತ್ತು. ಒಟ್ಟು 90 ಕೊಡವ ಕುಟುಂಬಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.

ಬತ್ತಿರ ಕುಟುಂಬ ಹಾಗೂ ತೊಟ್ಟಿಯಂಡ ಕುಟುಂಬಗಳ ನಡುವೆ ಹಾಕಿ ಪಂದ್ಯ ಏರ್ಪಟ್ಟಿತ್ತು. ಈ ಪಂದ್ಯ ನಡೆಯುತ್ತಿರುವ ವೇಳೆ 23 ವರ್ಷದ ತೊಟ್ಟಿಯಂಡ ತಂಡದ ಆಟಗಾರ ಸೋಮಣ್ಣ ಮೂರ್ಛೆ ತಪ್ಪಿದ್ದರು. 

ಕೂಡಲೆ ಸೋಮಣ್ಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಅವರನ್ನು ಮಡಿಕೇರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ. ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT