ತುಮಕೂರು ರಸ್ತೆ ಮೇಲ್ಸೇತುವೆ 
ರಾಜ್ಯ

ತುಮಕೂರು ರಸ್ತೆ ಫ್ಲೈಓವರ್ ಮೇಲೆ 1 ವಾರ ಸಂಚಾರ ಬಂದ್: ಸರ್ವೀಸ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ; ವಾಹನ ಸವಾರರ ಪರದಾಟ

ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ನೆಲಮಂಗಲ- ಗೊರಗುಂಟೆ ಪಾಳ್ಯ ಫ್ಲೈ ಓವರ್‌ನಲ್ಲಿ ಸ್ಪ್ಯಾಬ್‌ ಬಿಗಿಗೊಳಿಸುವ ಕೇಬಲ್‌ ಸಡಿಲಗೊಂಡಿದ್ದು, ಶನಿವಾರ ಸಂಜೆ ಬಳಿಕ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ನೆಲಮಂಗಲ- ಗೊರಗುಂಟೆ ಪಾಳ್ಯ ಫ್ಲೈ ಓವರ್‌ನಲ್ಲಿ ಸ್ಪ್ಯಾಬ್‌ ಬಿಗಿಗೊಳಿಸುವ ಕೇಬಲ್‌ ಸಡಿಲಗೊಂಡಿದ್ದು, ಶನಿವಾರ ಸಂಜೆ ಬಳಿಕ ಸಂಚಾರ ನಿರ್ಬಂಧಿಸಲಾಗಿದೆ.

102-103ನೇ ಪಿಲ್ಲರ್ ನಡುವಿನ ಸ್ಲಾಬ್‌ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಗೊರಗುಂಟೆಪಾಳ್ಯ-ನಾಗಸಂದ್ರದ 4 ಕಿಲೋಮೀಟರ್ ದೂರದ ಫ್ಲೈಓವರ್ ಬಂದ್ ಮಾಡಲಾಗಿದ್ದು ಬೆಳ್ಳಂಬೆಳಗ್ಗೆ ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಇನ್ನು ಡಿಸೆಂಬರ್ 31ರವರೆಗೆ ಫ್ಲೈ ಓವರ್ ಮೇಲೆ ಸಂಚಾರ ಬಂದ್ ಮಾಡಲಾಗಿದೆ.

ದೋಷ ಸರಿಪಡಿಸಲು ಒಂದು ವಾರ ಬೇಕಾಗಬಹುದು ಎಂದು ಅಂದಾಜಿಸಲಾಗಿದ್ದು, ಸಂಚಾರ ಪೊಲೀಸರು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಿದ್ದಾರೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಿರ್ವಹಣೆ ಮಾಡುತ್ತಿದ್ದಾಗ ಸ್ಪ್ಯಾಬ್‌ ಬಿಗಿಗೊಳಿಸುವ ಕೇಬಲ್‌ ಸಡಿಲವಾಗಿರುವುದು ಕಂಡು ಬಂದಿದೆ. ತಕ್ಷಣವೇ ಫ್ಲೈಓವರ್‌ ಮೇಲೆ ಎರಡೂ ಬದಿಯ ಸಂಚಾರ ನಿರ್ಬಂಧಿಸಲಾಯಿತು. ಲೋಪ ತಕ್ಷಣ ಪತ್ತೆಯಾಗಿದ್ದರಿಂದ ಭಾರಿ ಅನಾಹುತ ತಪ್ಪುವಂತಾಗಿದೆ.

ಹತ್ತು ವರ್ಷಗಳ ಹಿಂದೆ ನಿರ್ಮಿಸಿದ ಈ ಫ್ಲೈ ಓವರ್‌ನಲ್ಲಿ ಇಂಟರ್‌ ಲಾಕಿಂಕ್‌ ಸಿಸ್ಟಮ್‌ ಅಳವಡಿಸಲಾಗಿದೆ. ಒಂದು ಪಿಲ್ಲರ್‌ನಿಂದ ಇನ್ನೊಂದು ಪಿಲ್ಲರ್‌ ನಡುವಿನ ಸ್ಪ್ಯಾಬ್‌ಗಳನ್ನ ಬಿಗಿಗೊಳಿಸಲು ಅಳವಡಿಸಿದ ಕೇಬಲ್‌ನಲ್ಲಿ ಒಂದು ಕೇಬಲ್‌ ಸಡಿಲವಾಗಿರುವುದು ಕಂಡು ಬಂದಿದೆ . ಫ್ಲೈ ಓವರ್‌ನಲ್ಲಿ 16 ಕೇಬಲ್‌ಗಳನ್ನ ಅಳವಡಿಸಲಾಗಿದೆ. ಉಳಿದ 15 ಕೇಬಲ್‌ಗಳು ಸುಭದ್ರವಾಗಿವೆ’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ತಾಂತ್ರಿಕ ವಿಭಾಗದವರು ಆಗಮಿಸಲಿದ್ದು, ಇನ್ನೊಂದು ವಾರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು, ಅಲ್ಲಿಯವರೆಗೂ ಫ್ಲೈ ಓವರ್‌ ಬಂದ್‌ ಮಾಡಲಾಗುವುದು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ಮುಖ್ಯಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT