ನಳಿನ್ ಕುಮಾರ್ ಕಟೀಲ್ 
ರಾಜ್ಯ

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ತೆರೆ ಎಳೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ತೆರೆ ಎಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆಂದು ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕವೂ ಇಂತಹ ಊಹಾಪೋಹಗಳು ಹಬ್ಬಿದ್ದವು, ಆದರೆ ಅವರು ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆದರು. ಮುಂದಿನ 2023ರ ಚುನಾವಣೆ ವೇಳೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕೇವಲ ಕಪೋಲಕಲ್ಪಿತ. ಬಿಜೆಪಿ ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹರಡಿಸುತ್ತಾರೆ.  ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಸಿಎಂಗೆ ಯಾವುದೇ ಅನಾರೋಗ್ಯ ಇಲ್ಲ, ಕಾಲು ನೋವು ಮಾತ್ರ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೊಮ್ಮಾಯಿ ಅವರು ವಿದೇಶಕ್ಕೂ ಹೋಗಲ್ಲ, ಅವರ ಕಾಲಿನ ಸಮಸ್ಯೆಗೆ ಇಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT