ರಾಮ್ ಮಾಧವ್ 
ರಾಜ್ಯ

ಕಾಯ್ದೆ ಮೂಲಕ ಬಲವಂತದ ಮತಾಂತರ ನಿಯಂತ್ರಿಸಲಾಗುವುದು: ರಾಮ್ ಮಾಧವ್

ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಆತಂಕ ವ್ಯಕ್ತಪಡಿಸಿದ್ದು, ಕಾಯ್ದೆಯು ಜನವರಿಯಲ್ಲಿ ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮ್ ಮಾಧವ್ ಅವರು, ಮಸೂದೆ ಯಾವುದನ್ನೂ ನಿಷೇಧಿಸುವುದಿಲ್ಲ. ಬಲ, ವಂಚನೆ ಅಥವಾ ಆಮಿಷದ ಮೂಲಕ ಮತಾಂತರಗಳನ್ನು ಮಾಡಿದರೆ, ಅಂತಹ ಮತಾಂತರಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ, ಬಲವಂತದ ಮತಾಂತರವನ್ನು ನಿಯಂತ್ರಿಸುವುದೇ ಕಾಯ್ದೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಕಾನೂನನ್ನು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧವಲ್ಲದೆ, ಕೆಲವು ದುಷ್ಕೃತ್ಯಗಳ ವಿರುದ್ಧ ಮಾತ್ರ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಜನರನ್ನು ದಾರಿ ತಪ್ಪಿಸುವ ಅಥವಾ ಮತಾಂತರಗೊಳ್ಳಲು ಆಮಿಷಗಳನ್ನು ಬಳಸುವುದರ ವಿರುದ್ಧ ಕಾಯ್ದೆ ಜಾರಿಗೆ ತರಲಾಗುತ್ತಿದೆ.

ಮತಾಂತರವು ಕೌಟುಂಬಿಕ ಸಂಬಂಧಿತ ಉದ್ವಿಗ್ನತೆ ಮತ್ತು ಕೋಮು ಶಾಂತಿಗೆ ಭಂಗ ತರುವಂತಹ ಮೇಲಾಧಾರ ಪರಿಣಾಮಗಳಿಗೆ ಮತಾಂತರ ಕಾರಣವಾಗುವುದರಿಂದ ಕೆಲವನ್ನು ನಿಯಂತ್ರಿಸುವುದು ಈ ಕಾನೂನಿನ ಉದ್ದೇಶವಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು, ಮಸೂದೆಯನ್ನು ಪ್ರಸ್ತಾಪಿಸಲಾಗಿದೆ. ಸದನದ ಮುಂದೆ ಕಾಯ್ದೆ ಇರಿಸಲಾಗಿದ್ದು, ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಳಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಕುರಿತು ಮಾತನಾಡಿ, ವಿವಾದಗಳನ್ನು ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಪ್ರಚಾರಗಳ ನಡೆಸಲಾಗುತ್ತಿದೆ. ಯಾರೊಬ್ಬರ ಪೌರತ್ವವನ್ನು ಇಲ್ಲಿ ಕಸಿಯಲಾಗುವುದಿಲ್ಲ. ತಪ್ಪು ತಿಳುವಳಿಕೆಯನ್ನು ತೆರವುಗೊಳಿಸಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರವು ಸಿಎಎಗೆ ನಿಯಮಗಳನ್ನು ತರಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್