ರಾಮ್ ಮಾಧವ್ 
ರಾಜ್ಯ

ಕಾಯ್ದೆ ಮೂಲಕ ಬಲವಂತದ ಮತಾಂತರ ನಿಯಂತ್ರಿಸಲಾಗುವುದು: ರಾಮ್ ಮಾಧವ್

ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯನ್ನು ಶನಿವಾರ ಸಮರ್ಥಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾಧವ ಅವರು, ಕಾಯ್ದೆಯು ಬಲವಂತದ ಮತಾಂತರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆಗೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು ಆತಂಕ ವ್ಯಕ್ತಪಡಿಸಿದ್ದು, ಕಾಯ್ದೆಯು ಜನವರಿಯಲ್ಲಿ ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮ್ ಮಾಧವ್ ಅವರು, ಮಸೂದೆ ಯಾವುದನ್ನೂ ನಿಷೇಧಿಸುವುದಿಲ್ಲ. ಬಲ, ವಂಚನೆ ಅಥವಾ ಆಮಿಷದ ಮೂಲಕ ಮತಾಂತರಗಳನ್ನು ಮಾಡಿದರೆ, ಅಂತಹ ಮತಾಂತರಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ, ಬಲವಂತದ ಮತಾಂತರವನ್ನು ನಿಯಂತ್ರಿಸುವುದೇ ಕಾಯ್ದೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಕಾನೂನನ್ನು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧವಲ್ಲದೆ, ಕೆಲವು ದುಷ್ಕೃತ್ಯಗಳ ವಿರುದ್ಧ ಮಾತ್ರ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ. ಜನರನ್ನು ದಾರಿ ತಪ್ಪಿಸುವ ಅಥವಾ ಮತಾಂತರಗೊಳ್ಳಲು ಆಮಿಷಗಳನ್ನು ಬಳಸುವುದರ ವಿರುದ್ಧ ಕಾಯ್ದೆ ಜಾರಿಗೆ ತರಲಾಗುತ್ತಿದೆ.

ಮತಾಂತರವು ಕೌಟುಂಬಿಕ ಸಂಬಂಧಿತ ಉದ್ವಿಗ್ನತೆ ಮತ್ತು ಕೋಮು ಶಾಂತಿಗೆ ಭಂಗ ತರುವಂತಹ ಮೇಲಾಧಾರ ಪರಿಣಾಮಗಳಿಗೆ ಮತಾಂತರ ಕಾರಣವಾಗುವುದರಿಂದ ಕೆಲವನ್ನು ನಿಯಂತ್ರಿಸುವುದು ಈ ಕಾನೂನಿನ ಉದ್ದೇಶವಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು, ಮಸೂದೆಯನ್ನು ಪ್ರಸ್ತಾಪಿಸಲಾಗಿದೆ. ಸದನದ ಮುಂದೆ ಕಾಯ್ದೆ ಇರಿಸಲಾಗಿದ್ದು, ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಳಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಕುರಿತು ಮಾತನಾಡಿ, ವಿವಾದಗಳನ್ನು ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಪ್ರಚಾರಗಳ ನಡೆಸಲಾಗುತ್ತಿದೆ. ಯಾರೊಬ್ಬರ ಪೌರತ್ವವನ್ನು ಇಲ್ಲಿ ಕಸಿಯಲಾಗುವುದಿಲ್ಲ. ತಪ್ಪು ತಿಳುವಳಿಕೆಯನ್ನು ತೆರವುಗೊಳಿಸಲಾಗುವುದು ಮತ್ತು ಶೀಘ್ರದಲ್ಲೇ ಸರ್ಕಾರವು ಸಿಎಎಗೆ ನಿಯಮಗಳನ್ನು ತರಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT