ವಿಧಾನ ಸೌಧ 
ರಾಜ್ಯ

ಉತ್ತಮ ಆಡಳಿತ ಸೂಚ್ಯಂಕ ಕರ್ನಾಟಕಕ್ಕೆ ಆರನೇ ಸ್ಥಾನ: ಮೊದಲ ಸ್ಥಾನದಲ್ಲಿರುವ ರಾಜ್ಯ ಯಾವುದು?

ವಿವಿಧ ಕ್ಷೇತ್ರಗಳಲ್ಲಿ ರಾಜ್ಯಗಳ ಆಡಳಿತ ವ್ಯವಸ್ಥೆ, ವ್ಯವಸ್ಥೆಯಲ್ಲಿನ ಸುಧಾರಣೆಗಳ ಮೇಲೆ ಬೆಳಕು ಚೆಲ್ಲುವ ಉತ್ತಮ ಆಡಳಿತ ಸೂಚ್ಯಂಕ 2021 ವರದಿಯನ್ನು ಕೇಂದ್ರ ಸರ್ಕಾರವು  ಉತ್ತಮ ಆಡಳಿತ ದಿನವಾದ ಡಿ.25ರ ಶನಿವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ರಾಜ್ಯಗಳ ಆಡಳಿತ ವ್ಯವಸ್ಥೆ, ವ್ಯವಸ್ಥೆಯಲ್ಲಿನ ಸುಧಾರಣೆಗಳ ಮೇಲೆ ಬೆಳಕು ಚೆಲ್ಲುವ ಉತ್ತಮ ಆಡಳಿತ ಸೂಚ್ಯಂಕ 2021 ವರದಿಯನ್ನು ಕೇಂದ್ರ ಸರ್ಕಾರವು  ಉತ್ತಮ ಆಡಳಿತ ದಿನವಾದ ಡಿ.25ರ ಶನಿವಾರ ಬಿಡುಗಡೆ ಮಾಡಿದೆ.

ಸಮಗ್ರ ಪಟ್ಟಿಯಲ್ಲಿ, ಕಳೆದ ವರ್ಷ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ 5.109 ಅಂಕಗಳೊಂದಿಗೆ 6ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಗುಜರಾತ್‌ (5.662), ಮಹಾರಾಷ್ಟ್ರ(5.425) ಹಾಗೂ ಗೋವಾ(5.348) ರಾಜ್ಯಗಳು ಮೊದಲ 3 ಸ್ಥಾನ ಪಡೆದುಕೊಂಡಿವೆ.

2019ರಲ್ಲಿ ಸಮಗ್ರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ ಬಿಡುಗಡೆಯಾದ ವರದಿಯಲ್ಲಿ ಶೇ.0.2ರಷ್ಟು ಏರಿಕೆ ಕಂಡಿದ್ದರೂ, ಒಟ್ಟಾರೆ 3 ಸ್ಥಾನ ಕುಸಿತ ಕಂಡು 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂದಿದೆ. ಕೃಷಿ ಮತ್ತು ಸಂಬಂಧಿತ ವಲಯ, ಸಾರ್ವಜನಿಕ ಮೂಲಸೌಕರ್ಯ ಮತ್ತು ಸೇವೆಗಳು ಹಾಗೂ ಸಮಾಜ ಕಲ್ಯಾಣ ಮತ್ತು ಅಭಿವೃದ್ಧಿ ವಲಯದಲ್ಲಿ ಕರ್ನಾಟಕ ಪ್ರಗತಿ ತೋರಿಸಿದೆ.

ಒಟ್ಟು 10 ವಲಯಗಳಲ್ಲಿನ 58 ವಿಷಯಗಳನ್ನು ಆಧರಿಸಿ ಕೇಂದ್ರ ಸರ್ಕಾರವು ಈ ಸೂಚ್ಯಂಕವನ್ನು ಬಿಡುಗಡೆ ಮಾಡುತ್ತದೆ. ಈ ಬಾರಿ 4 ವಿಭಾಗದಲ್ಲಿ ರಾರ‍ಯಂಕಿಂಗ್‌ ಪ್ರಕಟಿಸಲಾಗಿದೆ. ದೊಡ್ಡ ರಾಜ್ಯಗಳ ಪಟ್ಟಿ1 (ಗ್ರೂಪ್‌ ಎ- 10 ರಾಜ್ಯ), ದೊಡ್ಡ ರಾಜ್ಯಗಳ ಪಟ್ಟಿ2 (ಗ್ರೂಪ್‌ ಬಿ- 8 ರಾಜ್ಯ), ಗುಡ್ಡಗಾಡು ರಾಜ್ಯಗಳು (11 ರಾಜ್ಯ), ಕೇಂದ್ರಾಡಳಿತ ಪ್ರದೇಶಗಳು (7) ಎಂದು ರಾಜ್ಯಗಳನ್ನು ವಿಂಗಡಿಸಲಾಗಿದೆ.

ಕೃಷಿ ಮತ್ತು ಸಂಬಂಧಿತ ಕ್ಷೇತ್ರ, ವಾಣಿಜ್ಯ ಮತ್ತು ಉದ್ಯಮ, ಮಾನವ ಸಂಪನ್ಮೂಲ ಅಭಿವೃದ್ಧಿ, ಸಾರ್ವಜನಿಕ ಆರೋಗ್ಯ, ಸಾರ್ವಜನಿಕ ಮೂಲಸೌಕರ್ಯ, ಆರ್ಥಿಕ ಆಡಳಿತ, ಸಾಮಾಜಿಕ ಕಲ್ಯಾಣ ಮತ್ತು ಅಭಿವೃದ್ಧಿ, ನ್ಯಾಯಾಂಗ ಮತ್ತು ಸಾರ್ವಜನಿಕ ಸುರಕ್ಷತೆ, ಪರಿಸರ, ನಾಗರಿಕ ಉದ್ದೇಶಿತ ಆಡಳಿತದಲ್ಲಿನ ರಾಜ್ಯಗಳನ್ನು ಸಾಧನೆ ಆಧರಿಸಿ ವರದಿ ತಯಾರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT