ತೇಜಸ್ವಿ ಸೂರ್ಯ 
ರಾಜ್ಯ

ಮುಸ್ಲಿಂ- ಕ್ರೈಸ್ತರನ್ನು ಆದಷ್ಟು ಬೇಗ ಹಿಂದೂ ಧರ್ಮಕ್ಕೆ ಕರೆತರಬೇಕು: ಉಡುಪಿಯಲ್ಲಿ ತೇಜಸ್ವಿ ಸೂರ್ಯ ಹೇಳಿಕೆ

ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.

ಉಡುಪಿ: ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.

ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ವಿಶ್ವಾರ್ಪಣಂ ನ 20ನೇ ದಿನ ಸಮಾರಂಭದಲ್ಲಿ ರಾಜಕಾರಣದಲ್ಲಿ ಯುವ ಪೀಳಿಗೆ ಪ್ರವೇಶ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಹೇಳಿದರು.

ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎಂಬುದು ಯಾವುದೂ ಇಲ್ಲ. ನಮ್ಮ ಮನೆ, ಅಕ್ಕ-ಪಕ್ಕದ ಗ್ರಾಮ, ಊರುಗಳಲ್ಲಿ ಘರ್ ವಾಪಸೀ ಮಾಡಬೇಕು.  ನಾವು ದೊಡ್ಡದಾಗಿ ಕನಸನ್ನು ಕಾಣಬೇಕು ಎಂದರು.

ಈ ದೇಶದಲ್ಲಿ ರಾಮಮಂದಿರವನ್ನು ಸ್ಥಾಪನೆ ಮಾಡಿದ್ದೇವೆ.  ಕಾಶ್ಮೀರದ 370 ಕಾಯ್ದೆಯನ್ನು ತೆಗೆದು ಹಾಕಿದ್ದೇವೆ. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು.  ಘರ್ ವಾಪಸೀಯನ್ನು ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ.  ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವೂ ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಕರೆ ನೀಡಿದರು.

ಭಾರತದಲ್ಲಿ ಶೇ. 80ರಷ್ಟಿರುವ ಹಿಂದುಗಳ ದೇವಾಲಯಗಳನ್ನು ಸರ್ಕಾರ ತನ್ನ ವಶದಲ್ಲಿಟ್ಟುಕೊಂಡಿವೆ, ಆದರೆ ಚರ್ಚ್, ಮಸೀದಿಗಳನ್ನು ಮಾತ್ರ ಆಯಾ ಧರ್ಮದವರಿಗೆ ನೀಡಿದೆ. ಅಂದರೆ ಇದು ಹಿಂದುಗಳಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT